<p><strong>ಹೊಸಪೇಟೆ (ವಿಜಯನಗರ):</strong> ‘ನೀಟ್ ಅಕ್ರಮ, ದಿನ ಬಳಕೆ ಸಾಮಗ್ರಿಗಳ ಬೆಲೆ ಏರಿಕೆ ವಿರೋಧಿಸಿ ಮೇ 21ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಲಿದೆ’ ಎಂದು ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಶೋಕ್ ಭೀಮಾನಾಯ್ಕ್ ತಿಳಿಸಿದರು.</p>.<p>ಭಾನುವಾರ ಇಲ್ಲಿ ನಡೆದ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ‘ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥ ಗೌಡ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ಆಡಬಾರದು ಎಂಬ ಸ್ಪಷ್ಟ ಸಂದೇಶವನ್ನು ಈ ಪ್ರತಿಭಟನೆ ಮೂಲಕ ಕೇಂದ್ರಕ್ಕೆ ರವಾನಿಸಲಾಗುವುದು’ ಎಂದು ಹೇಳಿದರು.</p>.<p>‘ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ಅಕ್ರಮ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ನೀಟ್ ಪರೀಕ್ಷೆ ಅಕ್ರಮ ತಡೆಗೆ ಕಠಿಣ ಕಾನೂನು ರೂಪಿಸಬೇಕು. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕೇ ಹೊರತು ಆತ್ಮಹತ್ಯೆ ಪರಿಹಾರವಲ್ಲ’ ಎಂದು ಹೇಳಿದರು.</p>.<p>ಹೊಸಪೇಟೆ ಘಟಕದ ಅಧ್ಯಕ್ಷ ಹರೂನ್ ಶೇಖ್ ಮಾತನಾಡಿ, ‘ಪಕ್ಷದ ಬಲವರ್ಧನೆಯಲ್ಲಿ ಯುವ ಕಾರ್ಯಕರ್ತರು ತೊಡಗಿಕೊಳ್ಳಬೇಕು. ಪಕ್ಷದ ತತ್ವ–ಸಿದ್ಧಾಂತಗಳನ್ನು ಯುವಜನರಿಗೆ ತಿಳಿಸಬೇಕಿದೆ’ ಎಂದರು.</p>.<p>ಜಿಲ್ಲಾ ಉಸ್ತುವಾರಿ ಅಬು ತಾಯರ್, ಉಪಾಧ್ಯಕ್ಷ ನಾಗರಾಜ್ ಬಡಲಡಿಕಿ, ಹೊಸಪೇಟೆ ಬ್ಲಾಕ್ ಅಧ್ಯಕ್ಷ ಪ್ರದೀಪ್, ಕಮಲಾಪುರ ಬ್ಲಾಕ್ ಅಧ್ಯಕ್ಷ ಗೌಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಲ್ತಾಫ್ ಶೇಖ್, ಕಾನೂನು ಘಟಕದ ಅಧ್ಯಕ್ಷ ಅಜಾದ್, ಗಣೇಶ್ ಪಾಟೀಲ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-25-572624812</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ‘ನೀಟ್ ಅಕ್ರಮ, ದಿನ ಬಳಕೆ ಸಾಮಗ್ರಿಗಳ ಬೆಲೆ ಏರಿಕೆ ವಿರೋಧಿಸಿ ಮೇ 21ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಲಿದೆ’ ಎಂದು ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಶೋಕ್ ಭೀಮಾನಾಯ್ಕ್ ತಿಳಿಸಿದರು.</p>.<p>ಭಾನುವಾರ ಇಲ್ಲಿ ನಡೆದ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ‘ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥ ಗೌಡ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ಆಡಬಾರದು ಎಂಬ ಸ್ಪಷ್ಟ ಸಂದೇಶವನ್ನು ಈ ಪ್ರತಿಭಟನೆ ಮೂಲಕ ಕೇಂದ್ರಕ್ಕೆ ರವಾನಿಸಲಾಗುವುದು’ ಎಂದು ಹೇಳಿದರು.</p>.<p>‘ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ಅಕ್ರಮ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ನೀಟ್ ಪರೀಕ್ಷೆ ಅಕ್ರಮ ತಡೆಗೆ ಕಠಿಣ ಕಾನೂನು ರೂಪಿಸಬೇಕು. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕೇ ಹೊರತು ಆತ್ಮಹತ್ಯೆ ಪರಿಹಾರವಲ್ಲ’ ಎಂದು ಹೇಳಿದರು.</p>.<p>ಹೊಸಪೇಟೆ ಘಟಕದ ಅಧ್ಯಕ್ಷ ಹರೂನ್ ಶೇಖ್ ಮಾತನಾಡಿ, ‘ಪಕ್ಷದ ಬಲವರ್ಧನೆಯಲ್ಲಿ ಯುವ ಕಾರ್ಯಕರ್ತರು ತೊಡಗಿಕೊಳ್ಳಬೇಕು. ಪಕ್ಷದ ತತ್ವ–ಸಿದ್ಧಾಂತಗಳನ್ನು ಯುವಜನರಿಗೆ ತಿಳಿಸಬೇಕಿದೆ’ ಎಂದರು.</p>.<p>ಜಿಲ್ಲಾ ಉಸ್ತುವಾರಿ ಅಬು ತಾಯರ್, ಉಪಾಧ್ಯಕ್ಷ ನಾಗರಾಜ್ ಬಡಲಡಿಕಿ, ಹೊಸಪೇಟೆ ಬ್ಲಾಕ್ ಅಧ್ಯಕ್ಷ ಪ್ರದೀಪ್, ಕಮಲಾಪುರ ಬ್ಲಾಕ್ ಅಧ್ಯಕ್ಷ ಗೌಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಲ್ತಾಫ್ ಶೇಖ್, ಕಾನೂನು ಘಟಕದ ಅಧ್ಯಕ್ಷ ಅಜಾದ್, ಗಣೇಶ್ ಪಾಟೀಲ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-25-572624812</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>