ಸಂತ ಸೇವಾಲಾಲ್ ಬಂಜಾರ ಅಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆ, ಅಖಿಲ ಭಾರತ ಬಂಜಾರ ಸೇವಾ ಸಂಘದಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ತಾಲ್ಲೂಕಿನ ವಿವಿಧ ತಾಂಡಾಗಳ ಜನರು ಪಾಲ್ಗೊಂಡಿದ್ದರು. ಪಟ್ಟಣದ ಪ್ರಮುಖ ಮಾರ್ಗಗಳಲ್ಲಿ ರ್ಯಾಲಿ ನಡೆಸಿದ ಅವರು, ರಾಜ್ಯಪಾಲರ ಹೆಸರಿಗೆ ಬರೆದ ಮನವಿ ಪತ್ರ ತಹಶೀಲ್ದಾರ್ಗೆ ಸಲ್ಲಿಸಿ, ತನ್ನ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕೆಂದು ಆಗ್ರಹಿಸಿದರು.