<p><strong>ಹೊಸಪೇಟೆ (ವಿಜಯನಗರ):</strong> ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಹಂಪಿಗೆ ಭೇಟಿ ನೀಡಿ ವಿರೂಪಾಕ್ಷೇಶ್ವರದ ದರ್ಶನ ಪಡೆದರು. ಅತ್ಯಂತ ವೈಭವಯುತವಾಗಿ ಮೆರೆದಿದ್ದ ಸ್ಥಳ ನಾಶವಾದ ಬಗೆಯನ್ನು ಕಂಡು ನೋವಾಗುತ್ತಿದೆ ಎಂದು ಪ್ರತಿಕ್ರಿಯಿಸಿದರು.</p>.<p>‘ಕೃಷ್ಣದೇವರಾಯ ವಿಜಯನಗರ ಸಾಮ್ರಾಜ್ಯದ ಅತ್ಯಂತ ಶ್ರೇಷ್ಠ ದೊರೆಯಾಗಿದ್ದ. ಆತ ಎಲ್ಲರಿಗೂ ಪ್ರಿಯನಾದಂತಹ ರಾಜನಾಗಿದ್ದ. ಆಡಳಿತ ಎಂದರೆ ಹೇಗಿರಬೇಕು ಎಂಬುದಕ್ಕೆ ಆತ ಆದರ್ಶಪ್ರಾಯನಾಗಿದ್ದ. ಈಗಿನ ಆಡಳಿತಗಾರರಿಗೂ ಆತ ಬಹುದೊಡ್ಡ ಮಾದರಿ’ ಎಂದು ಸಚಿವರು ತಿಳಿಸಿದರು.</p>.<p>‘ಹಂಪಿಯೇನೋ ಹಾಳಾಯಿತು, ಹೀಗಿದ್ದರೂ ಇಲ್ಲಿನ ಸ್ಮಾರಕಗಳು ಗತಕಾಲದ ವೈಭವವನ್ನು ಈಗಲೂ ಹೇಳುತ್ತಿವೆ, ಹೀಗಾಗಿ ಇಲ್ಲಿನ ಸ್ಮಾರಕಗಳನ್ನು ಸಂರಕ್ಷಿಸುವ ಹೊಣೆಗಾರಿಕೆ ನಮ್ಮೆಲರ ಮೇಲಿದೆ. ಭಾರತೀಯ ಪುರಾತತ್ವ ಸರ್ವೇಕ್ಷಾಣಾ ಇಲಾಖೆ (ಎಎಸ್ಐ) ತನ್ನಿಂದಾದ ಕೆಲಸವನ್ನು ಮಾಡುತ್ತಿದೆ’ ಎಂದು ನಿರ್ಮಲಾ ಹೇಳಿದರು.</p>.<p>‘ಹಂಪಿಯ ಬಗ್ಗೆ ನನಗೆ ಹಲವಾರು ಮಂದಿ ಹೇಳಿದ್ದರು. ಆದರೆ ಇದುವರೆಗೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ಯುನೆಸ್ಕೊ ಗುರುತಿಸಿರುವ ಐತಿಹಾಸಿಕ ತಾಣದ ಪ್ರತಿಯೊಂದು ಶಿಲೆಯು ಇಲ್ಲಿಯ ಪರಂಪರೆಯನ್ನು ಪ್ರತಿಬಿಂಬಿಸುವಂತಿ’ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಇದಕ್ಕೆ ಮೊದಲು ವಾದ್ಯಘೋಷಗಳೊಂದಿಗೆ ಸಚಿವರನ್ನು ದೇವಸ್ಥಾನಕ್ಕೆ ಸ್ವಾಗತಿಸಲಾಯಿತು. ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರು ವಿರೂಪಾಕ್ಷ ಕ್ಷೇತ್ರದ ಮಹತ್ವ ತಿಳಿಸಿ ವಿರೂಪಾಕ್ಷ ವಿಗ್ರಹದ ವಿಶೇಷತೆಗಳನ್ನೂ ವಿವರಿಸಿದರು.</p>.<p>ಸಂಸದ ಇ.ತುಕಾರಾಂ, ವಿಜಯನಗರ ರಾಜವಂಶಸ್ಥ ಶ್ರೀಕೃಷ್ಣದೇವರಾಯ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್ ಅಲಿ ಅಕ್ರಂ ಷಾ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಹಂಪಿಗೆ ಭೇಟಿ ನೀಡಿ ವಿರೂಪಾಕ್ಷೇಶ್ವರದ ದರ್ಶನ ಪಡೆದರು. ಅತ್ಯಂತ ವೈಭವಯುತವಾಗಿ ಮೆರೆದಿದ್ದ ಸ್ಥಳ ನಾಶವಾದ ಬಗೆಯನ್ನು ಕಂಡು ನೋವಾಗುತ್ತಿದೆ ಎಂದು ಪ್ರತಿಕ್ರಿಯಿಸಿದರು.</p>.<p>‘ಕೃಷ್ಣದೇವರಾಯ ವಿಜಯನಗರ ಸಾಮ್ರಾಜ್ಯದ ಅತ್ಯಂತ ಶ್ರೇಷ್ಠ ದೊರೆಯಾಗಿದ್ದ. ಆತ ಎಲ್ಲರಿಗೂ ಪ್ರಿಯನಾದಂತಹ ರಾಜನಾಗಿದ್ದ. ಆಡಳಿತ ಎಂದರೆ ಹೇಗಿರಬೇಕು ಎಂಬುದಕ್ಕೆ ಆತ ಆದರ್ಶಪ್ರಾಯನಾಗಿದ್ದ. ಈಗಿನ ಆಡಳಿತಗಾರರಿಗೂ ಆತ ಬಹುದೊಡ್ಡ ಮಾದರಿ’ ಎಂದು ಸಚಿವರು ತಿಳಿಸಿದರು.</p>.<p>‘ಹಂಪಿಯೇನೋ ಹಾಳಾಯಿತು, ಹೀಗಿದ್ದರೂ ಇಲ್ಲಿನ ಸ್ಮಾರಕಗಳು ಗತಕಾಲದ ವೈಭವವನ್ನು ಈಗಲೂ ಹೇಳುತ್ತಿವೆ, ಹೀಗಾಗಿ ಇಲ್ಲಿನ ಸ್ಮಾರಕಗಳನ್ನು ಸಂರಕ್ಷಿಸುವ ಹೊಣೆಗಾರಿಕೆ ನಮ್ಮೆಲರ ಮೇಲಿದೆ. ಭಾರತೀಯ ಪುರಾತತ್ವ ಸರ್ವೇಕ್ಷಾಣಾ ಇಲಾಖೆ (ಎಎಸ್ಐ) ತನ್ನಿಂದಾದ ಕೆಲಸವನ್ನು ಮಾಡುತ್ತಿದೆ’ ಎಂದು ನಿರ್ಮಲಾ ಹೇಳಿದರು.</p>.<p>‘ಹಂಪಿಯ ಬಗ್ಗೆ ನನಗೆ ಹಲವಾರು ಮಂದಿ ಹೇಳಿದ್ದರು. ಆದರೆ ಇದುವರೆಗೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ಯುನೆಸ್ಕೊ ಗುರುತಿಸಿರುವ ಐತಿಹಾಸಿಕ ತಾಣದ ಪ್ರತಿಯೊಂದು ಶಿಲೆಯು ಇಲ್ಲಿಯ ಪರಂಪರೆಯನ್ನು ಪ್ರತಿಬಿಂಬಿಸುವಂತಿ’ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಇದಕ್ಕೆ ಮೊದಲು ವಾದ್ಯಘೋಷಗಳೊಂದಿಗೆ ಸಚಿವರನ್ನು ದೇವಸ್ಥಾನಕ್ಕೆ ಸ್ವಾಗತಿಸಲಾಯಿತು. ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರು ವಿರೂಪಾಕ್ಷ ಕ್ಷೇತ್ರದ ಮಹತ್ವ ತಿಳಿಸಿ ವಿರೂಪಾಕ್ಷ ವಿಗ್ರಹದ ವಿಶೇಷತೆಗಳನ್ನೂ ವಿವರಿಸಿದರು.</p>.<p>ಸಂಸದ ಇ.ತುಕಾರಾಂ, ವಿಜಯನಗರ ರಾಜವಂಶಸ್ಥ ಶ್ರೀಕೃಷ್ಣದೇವರಾಯ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್ ಅಲಿ ಅಕ್ರಂ ಷಾ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>