<p><strong>ಕೆ.ಸೋಮಶೇಖರ್</strong></p> <p><strong>ಹೂವಿನಹಡಗಲಿ (ವಿಜಯನಗರ ಜಿಲ್ಲೆ):</strong> ತಾಲ್ಲೂಕಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಸರ್ಕಾರ ನಾಲ್ಕು ತಿಂಗಳಿಂದ ತರಕಾರಿ, ಮೊಟ್ಟೆ ಖರೀದಿಗೆ ಹಣ ಬಿಡುಗಡೆಗೊಳಿಸಿಲ್ಲ. ಇದರಿಂದ ಈ ಯೋಜನೆ ನಿರ್ವಹಿಸಲು ಶಿಕ್ಷಕರು ಪರದಾಡುವಂತಾಗಿದೆ.</p>.<p>ಶಾಲೆಗಳಿಗೆ ಸರ್ಕಾರ ಪ್ರತಿ ತಿಂಗಳು ಆಹಾರ ಪದಾರ್ಥ ಪೂರೈಸುತ್ತದೆ. ಶೈಕ್ಷಣಿಕ ವರ್ಷ ಪ್ರಾರಂಭವಾದಾಗಿನಿಂದ ತರಕಾರಿ, ಮಸಾಲೆ, ಉಪ್ಪು ಹಾಗೂ ಮೊಟ್ಟೆ ಖರೀದಿಗೆ ಹಣ ಬಿಡುಗಡೆಗೊಳಿಸಿಲ್ಲ. ಇವುಗಳ ಬೆಲೆ ಏರಿಕೆ ಒಂದೆಡೆಯಿದ್ದರೆ, ಖರೀದಿಗೆ ಹಣ ಬಿಡುಗಡೆ ಆಗದಿರುವುದು ಮತ್ತೊಂದು ಸಮಸ್ಯೆಯಾಗಿದೆ.</p>.<p>‘ನಮ್ಮ ಸ್ವಂತ ಹಣ ಖರ್ಚು ಮಾಡಿಕೊಂಡು ಮೊಟ್ಟೆ, ತರಕಾರಿ ಖರೀದಿಸಿ, ಶಾಲೆಗೆ ತರುತ್ತಿದ್ದೇವೆ. ಕೆಲ ತರಕಾರಿ ಅಂಗಡಿಗಳಲ್ಲಿ ಹತ್ತಾರು ಸಾವಿರ ರೂಪಾಯಿ ಬಾಕಿ ಉಳಿದಿದೆ. ಬಾಕಿ ಪಟ್ಟಿ ಬೆಳೆಯುತ್ತಿದೆ ಹೊರತು ಅನುದಾನ ಮಾತ್ರ ಬಿಡುಗಡೆಯಾಗುತ್ತಿಲ್ಲ’ ಎಂದು ಶಿಕ್ಷಕರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ತಾಲ್ಲೂಕಿನಲ್ಲಿ 61 ಕಿರಿಯ ಪ್ರಾಥಮಿಕ, 79 ಹಿರಿಯ ಪ್ರಾಥಮಿಕ, 30 ಪ್ರೌಢಶಾಲೆ, 4 ಪಬ್ಲಿಕ್ ಶಾಲೆಗಳು ಸೇರಿ 179 ಶಾಲೆಗಳಿವೆ. ಪ್ರಾಥಮಿಕ ಶಾಲೆಗಳಲ್ಲಿ 19,854, ಪ್ರೌಢಶಾಲೆಗಳಲ್ಲಿ 5,791 ವಿದ್ಯಾರ್ಥಿಗಳು ಸೇರಿ 25,645 ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಯೋಜನೆ ಫಲಾನುಭವಿಗಳಿದ್ದಾರೆ.</p>.<p>‘ಮಧ್ಯಾಹ್ನದ ಬಿಸಿಯೂಟಕ್ಕೆ ಅಕ್ಕಿ, ಬೇಳೆ, ಎಣ್ಣೆಯನ್ನು ಸರ್ಕಾರ ಪೂರೈಸುತ್ತಿದೆ. ತರಕಾರಿ, ಮಸಾಲೆ, ಉಪ್ಪು ಖರೀದಿಗೆ 1 ರಿಂದ 5ನೇ ತರಗತಿವರೆಗಿನ ಪ್ರತಿ ವಿದ್ಯಾರ್ಥಿಗೆ ₹1.93 ಹಾಗೂ 6 ರಿಂದ 10ನೇ ತರಗತಿಯ ಪ್ರತಿ ವಿದ್ಯಾರ್ಥಿಗೆ ₹2.89ರಂತೆ ಸರ್ಕಾರ ಹಣ ನೀಡುತ್ತದೆ. ಪ್ರತಿ ವಿದ್ಯಾರ್ಥಿಗೆ ವಾರಕ್ಕೆ ಎರಡರಂತೆ ಮೊಟ್ಟೆ ನೀಡಲಾಗುತ್ತಿದೆ. ಇಷ್ಟೂ ದುಡ್ಡನ್ನು ಇದೀಗ ಶಿಕ್ಷಕರೇ ಹೊಂದಿಸಿಕೊಂಡು ಊಟ ಬಡಿಸುತ್ತಿದ್ದೇವೆ’ ಎಂದು ಶಿಕ್ಷಕರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಸೋಮಶೇಖರ್</strong></p> <p><strong>ಹೂವಿನಹಡಗಲಿ (ವಿಜಯನಗರ ಜಿಲ್ಲೆ):</strong> ತಾಲ್ಲೂಕಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಸರ್ಕಾರ ನಾಲ್ಕು ತಿಂಗಳಿಂದ ತರಕಾರಿ, ಮೊಟ್ಟೆ ಖರೀದಿಗೆ ಹಣ ಬಿಡುಗಡೆಗೊಳಿಸಿಲ್ಲ. ಇದರಿಂದ ಈ ಯೋಜನೆ ನಿರ್ವಹಿಸಲು ಶಿಕ್ಷಕರು ಪರದಾಡುವಂತಾಗಿದೆ.</p>.<p>ಶಾಲೆಗಳಿಗೆ ಸರ್ಕಾರ ಪ್ರತಿ ತಿಂಗಳು ಆಹಾರ ಪದಾರ್ಥ ಪೂರೈಸುತ್ತದೆ. ಶೈಕ್ಷಣಿಕ ವರ್ಷ ಪ್ರಾರಂಭವಾದಾಗಿನಿಂದ ತರಕಾರಿ, ಮಸಾಲೆ, ಉಪ್ಪು ಹಾಗೂ ಮೊಟ್ಟೆ ಖರೀದಿಗೆ ಹಣ ಬಿಡುಗಡೆಗೊಳಿಸಿಲ್ಲ. ಇವುಗಳ ಬೆಲೆ ಏರಿಕೆ ಒಂದೆಡೆಯಿದ್ದರೆ, ಖರೀದಿಗೆ ಹಣ ಬಿಡುಗಡೆ ಆಗದಿರುವುದು ಮತ್ತೊಂದು ಸಮಸ್ಯೆಯಾಗಿದೆ.</p>.<p>‘ನಮ್ಮ ಸ್ವಂತ ಹಣ ಖರ್ಚು ಮಾಡಿಕೊಂಡು ಮೊಟ್ಟೆ, ತರಕಾರಿ ಖರೀದಿಸಿ, ಶಾಲೆಗೆ ತರುತ್ತಿದ್ದೇವೆ. ಕೆಲ ತರಕಾರಿ ಅಂಗಡಿಗಳಲ್ಲಿ ಹತ್ತಾರು ಸಾವಿರ ರೂಪಾಯಿ ಬಾಕಿ ಉಳಿದಿದೆ. ಬಾಕಿ ಪಟ್ಟಿ ಬೆಳೆಯುತ್ತಿದೆ ಹೊರತು ಅನುದಾನ ಮಾತ್ರ ಬಿಡುಗಡೆಯಾಗುತ್ತಿಲ್ಲ’ ಎಂದು ಶಿಕ್ಷಕರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ತಾಲ್ಲೂಕಿನಲ್ಲಿ 61 ಕಿರಿಯ ಪ್ರಾಥಮಿಕ, 79 ಹಿರಿಯ ಪ್ರಾಥಮಿಕ, 30 ಪ್ರೌಢಶಾಲೆ, 4 ಪಬ್ಲಿಕ್ ಶಾಲೆಗಳು ಸೇರಿ 179 ಶಾಲೆಗಳಿವೆ. ಪ್ರಾಥಮಿಕ ಶಾಲೆಗಳಲ್ಲಿ 19,854, ಪ್ರೌಢಶಾಲೆಗಳಲ್ಲಿ 5,791 ವಿದ್ಯಾರ್ಥಿಗಳು ಸೇರಿ 25,645 ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಯೋಜನೆ ಫಲಾನುಭವಿಗಳಿದ್ದಾರೆ.</p>.<p>‘ಮಧ್ಯಾಹ್ನದ ಬಿಸಿಯೂಟಕ್ಕೆ ಅಕ್ಕಿ, ಬೇಳೆ, ಎಣ್ಣೆಯನ್ನು ಸರ್ಕಾರ ಪೂರೈಸುತ್ತಿದೆ. ತರಕಾರಿ, ಮಸಾಲೆ, ಉಪ್ಪು ಖರೀದಿಗೆ 1 ರಿಂದ 5ನೇ ತರಗತಿವರೆಗಿನ ಪ್ರತಿ ವಿದ್ಯಾರ್ಥಿಗೆ ₹1.93 ಹಾಗೂ 6 ರಿಂದ 10ನೇ ತರಗತಿಯ ಪ್ರತಿ ವಿದ್ಯಾರ್ಥಿಗೆ ₹2.89ರಂತೆ ಸರ್ಕಾರ ಹಣ ನೀಡುತ್ತದೆ. ಪ್ರತಿ ವಿದ್ಯಾರ್ಥಿಗೆ ವಾರಕ್ಕೆ ಎರಡರಂತೆ ಮೊಟ್ಟೆ ನೀಡಲಾಗುತ್ತಿದೆ. ಇಷ್ಟೂ ದುಡ್ಡನ್ನು ಇದೀಗ ಶಿಕ್ಷಕರೇ ಹೊಂದಿಸಿಕೊಂಡು ಊಟ ಬಡಿಸುತ್ತಿದ್ದೇವೆ’ ಎಂದು ಶಿಕ್ಷಕರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>