<p><strong>ಹೊಸಪೇಟೆ (ವಿಜಯನಗರ)</strong>: ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ 15ರಷ್ಟು ಎನ್ಆರ್ಐ ಕೋಟಾ ಜಾರಿ ಮಾಡಿರುವುದನ್ನು ಕೈ ಬಿಡಲು ಆಗ್ರಹಿಸಿ ಎಐಡಿಎಸ್ಒ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಇಲ್ಲಿನ ತಾಲ್ಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.</p>.<p>ಜಿಲ್ಲಾ ಸಂಚಾಲಕ ರವಿಕಿರಣ್ ಜೆ.ಪಿ. ಮಾತನಾಡಿ, ರಾಜ್ಯ ಸರ್ಕಾರವು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರತಿ ಸೀಟಿಗೆ ₹25 ಲಕ್ಷ ದುಬಾರಿ ಶುಲ್ಕದೊಂದಿಗೆ ಶೇ15 ಎನ್ಆರ್ಐ ಕೋಟಾವನ್ನು ಆರಂಭಿಸಲು ನಿರ್ಧರಿಸಿರುವುದು ಖಂಡನೀಯ ಎಂದರು.</p>.<p>ವೈದ್ಯಕೀಯ ಕಾಲೇಜುಗಳನ್ನು ಬಲಪಡಿಸಲು ರಾಜ್ಯದ ಬೊಕ್ಕಸದಿಂದ ಅವಶ್ಯಕ ಹಣವನ್ನು ಮಂಜೂರು ಮಾಡುವ ಬದಲು, ಸರ್ಕಾರವು ಈ ಹೊರೆಯನ್ನು ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳ ಮೇಲೆ ವರ್ಗಾಯಿಸುತ್ತಿದೆ. ಇಂತಹ ನೀತಿಗಳು ಸರ್ಕಾರಿ ಕಾಲೇಜುಗಳಲ್ಲಿ ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸುತ್ತಾ, ಸಂಪೂರ್ಣ ಖಾಸಗೀಕರಣಕ್ಕೆ ಎಡೆ ಮಾಡಿಕೊಡುತ್ತವೆ ಎಂದರು.</p>.<p>ಯು.ಉಮಾದೇವಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಾದ ಆದಿತ್ಯ, ಗೌತಮ್, ಸುಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ)</strong>: ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ 15ರಷ್ಟು ಎನ್ಆರ್ಐ ಕೋಟಾ ಜಾರಿ ಮಾಡಿರುವುದನ್ನು ಕೈ ಬಿಡಲು ಆಗ್ರಹಿಸಿ ಎಐಡಿಎಸ್ಒ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಇಲ್ಲಿನ ತಾಲ್ಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.</p>.<p>ಜಿಲ್ಲಾ ಸಂಚಾಲಕ ರವಿಕಿರಣ್ ಜೆ.ಪಿ. ಮಾತನಾಡಿ, ರಾಜ್ಯ ಸರ್ಕಾರವು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರತಿ ಸೀಟಿಗೆ ₹25 ಲಕ್ಷ ದುಬಾರಿ ಶುಲ್ಕದೊಂದಿಗೆ ಶೇ15 ಎನ್ಆರ್ಐ ಕೋಟಾವನ್ನು ಆರಂಭಿಸಲು ನಿರ್ಧರಿಸಿರುವುದು ಖಂಡನೀಯ ಎಂದರು.</p>.<p>ವೈದ್ಯಕೀಯ ಕಾಲೇಜುಗಳನ್ನು ಬಲಪಡಿಸಲು ರಾಜ್ಯದ ಬೊಕ್ಕಸದಿಂದ ಅವಶ್ಯಕ ಹಣವನ್ನು ಮಂಜೂರು ಮಾಡುವ ಬದಲು, ಸರ್ಕಾರವು ಈ ಹೊರೆಯನ್ನು ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳ ಮೇಲೆ ವರ್ಗಾಯಿಸುತ್ತಿದೆ. ಇಂತಹ ನೀತಿಗಳು ಸರ್ಕಾರಿ ಕಾಲೇಜುಗಳಲ್ಲಿ ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸುತ್ತಾ, ಸಂಪೂರ್ಣ ಖಾಸಗೀಕರಣಕ್ಕೆ ಎಡೆ ಮಾಡಿಕೊಡುತ್ತವೆ ಎಂದರು.</p>.<p>ಯು.ಉಮಾದೇವಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಾದ ಆದಿತ್ಯ, ಗೌತಮ್, ಸುಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>