ಕುಲಪತಿ ಪ್ರೊ. ಸ.ಚಿ.ರಮೇಶ ಮಾತನಾಡಿ, ‘ಬದಲಾದ ಕಾಲದೊಂದಿಗೆ ಎಲ್ಲರೂ ಬದಲಾಗುವುದು ಅನಿವಾರ್ಯ. ಇಲ್ಲವಾದರೆ ಆಧುನಿಕ ಜಗತ್ತಿನಲ್ಲಿ ಹಿಂದುಳಿದು ಬಿಡುತ್ತೇವೆ. ಅಂತರ್ಜಾಲದ ಬಳಕೆ ಜನರ ಜೀವನದ ಅವಿಭಾಜ್ಯ ಅಂಗವಾಗಿದೆ. ಶಿಕ್ಷಣ, ಮಾಹಿತಿ, ಬ್ಯಾಂಕಿಂಗ್ ಸಂಶೋಧನೆ ಸೇರಿದಂತೆ ಎಲ್ಲದಕ್ಕೂ ಅಂತರ್ಜಾಲವನ್ನೇ ಅವಲಂಬಿಸಿದ್ದೇವೆ. ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರತ್ಯೇಕವಾದ ಸುಸಜ್ಜಿತವಾದ ಅಂತರ್ಜಾಲ ಶೋಧ ಕೇಂದ್ರವನ್ನು ವಿದ್ಯಾರ್ಥಿಗಳು ಮತ್ತು ಸಂಶೋಧನಾರ್ಥಿಗಳ ಉಪಯೋಗಕ್ಕಾಗಿ ನಿರ್ಮಿಸಲಾಗಿದೆ’ ಎಂದು ತಿಳಿಸಿದರು.