ಹೊಸಕೋಟೆ: ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ವಾಲ್ಮೀಕಿ ನಗರದಲ್ಲಿ ಶನಿವಾರ ರಾತ್ರಿ ವೃದ್ಧ ದಂಪತಿ ಕೊಲೆ ನಡೆದಿದೆ. ಭಾನುವಾರ ಮಧ್ಯಾಹ್ನ ಪ್ರಕರಣ ಬೆಳಕಿದೆ ಬಂದಿದೆ. ಕೊಲೆ ಶಂಕೆ ಇದ್ದು, ಮೃತರ ಪುತ್ರಿ ನೀಡಿರುವ ದೂರಿನ ಮೇರೆಗೆ ಪುತ್ರ ಮತ್ತು ಸೊಸೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸೂಲಿಬೆಲೆ ಗ್ರಾಮದ ಸಪಾರಿ ರಾಮಕೃಷ್ಣಪ್ಪ(70) ಹಾಗೂ ಅವರ ಪತ್ನಿ ಮುನಿರಾಮಕ್ಕ (65) ಕೊಲೆಯಾದವರು. ಆಸ್ತಿ ವಿಚಾರದಲ್ಲಿ ಈ ಕೊಲೆ ನಡೆದಿರುವ ಅನುಮಾನವಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಹಲ್ಲೆ ನಡೆಸಿ ಹತ್ಯೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಮೃತರ ಮೂರನೇ ಪುತ್ರಿ ಶಕುಂತಲಾ ಅವರ ದೂರಿನ ಮೇರೆಗೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್.ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.
ಸೂಲಿಬೆಲೆ ಪೊಲೀಸ್ ಇನ್ಸ್ಪೆಕ್ಟರ್ ರವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.