<p><strong>ಹೊಸಪೇಟೆ</strong> (ವಿಜಯನಗರ): ಜಿಲ್ಲೆಯಲ್ಲಿ ಈರುಳ್ಳಿಯ ಕಳಪೆ ಬೀಜಗಳನ್ನು ಮಾರಾಟ ಮಾಡಿದ ಎರಡು ಕಂಪನಿಗಳಿಂದಾಗ ರೈತರು ನಷ್ಟಕ್ಕೆ ಒಳಗಾಗಿದ್ದಾರೆ. ಈ ಕಂಪನಿಗಳ ವಿರುದ್ಧ ಕ್ರಮದ ಜತೆಗೆ ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಈರುಳ್ಳಿ ಬೆಳೆಗಾರರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿದರು.</p>.<p>ಕರ್ನಾಟಕ ರಾಜ್ಯ ಈರುಳ್ಳಿ ಬೆಳೆಗಾರರ ಸಂಘದ ಅಧ್ಯಕ್ಷ ಎನ್.ಎಂ.ಸಿದ್ದೇಶ್. ಉಪಾಧ್ಯಕ್ಷ ಕರಡಿ ಶಾಂತಕುಮಾರ್ ಚಪ್ಪರದಹಳ್ಳಿ. ಜಿಲ್ಲಾ ಘಟಕದ ಅಧ್ಯಕ್ಷ ಕೊಚ್ಚಾಲಿ ಮಂಜುನಾಥ್ ಅವರ ನೇತೃತ್ವದಲ್ಲಿ ಜಿಲ್ಲಾದಿಕಾರಿ ಎಂ.ಎಂ.ದಿವಾಕರ್ ಅವರನ್ನು ನಿಯೋಗ ಭೇಟಿ ಮಾಡಿ, ಸಿಎಂಗೆ ಮನವಿ ಸಲ್ಲಿಸಿತು.</p>.<p>‘ಕಳಸಾ’ ಮತ್ತು ‘ಪ್ರೇಮ’ ಎಂಬ ಬೀಜ ಕಂಪನಿಗಳು ರೈತರಿಗೆ ಪೂರೈಸಿದ ಈರುಳ್ಳಿ ಬೀಜ ಕಳಪೆಯಾಗಿದ್ದವು. ಇದರ ಬಗ್ಗೆ ಸಮಗ್ರ ತನಿಖೆ ನಡೆದಿ ಕಂಪನಿಗಳು ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಹಾಗೂ ರೈತರಿಗೆ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು.</p>.<p>ದರ ಕುಸಿತ: ಈರುಳ್ಳಿ ದರ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಸರ್ಕಾರ ₹4,000 ಬೆಂಬಲ ಬೆಲೆ ಘೋಷಿಸಬೇಕು ಮತ್ತು ಎಲ್ಲಾ ತಾಲ್ಲೂಕುಗಳಲ್ಲಿ ಖರೀದಿ ಕೇಂದ್ರ ತೆರೆಯಬೇಕು. ಯೂರಿಯಾ ಗೊಬ್ಬರ ಕೊರತೆಯನ್ನು ನೀಗಿಸಬೇಕು ಎಂದು ಸಹ ಮನವಿಯಲ್ಲಿ ವಿನಂತಿ ಮಾಡಲಾಯಿತು.</p>.<p>ಕರ್ನಾಟಕ ರಾಜ್ಯ ರೈತ ಸಂಘ ಪ್ರದಾನ ಕಾರ್ಯದರ್ಶಿ ಜಿ.ಮಲ್ಲಿಕಾರ್ಜುನ್. ದೊಡ್ಡಬಸಪ್ಪ ಬ್ಯಾಲಾಳ್ ಹಗರಿಬೊಮ್ಮನಹಳ್ಳಿ. ಅಲಬೂರು ಗ ದೇವಪ್ಪ, ವರಕೇರಿ ಹನುಮಂತಪ್ಪ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ</strong> (ವಿಜಯನಗರ): ಜಿಲ್ಲೆಯಲ್ಲಿ ಈರುಳ್ಳಿಯ ಕಳಪೆ ಬೀಜಗಳನ್ನು ಮಾರಾಟ ಮಾಡಿದ ಎರಡು ಕಂಪನಿಗಳಿಂದಾಗ ರೈತರು ನಷ್ಟಕ್ಕೆ ಒಳಗಾಗಿದ್ದಾರೆ. ಈ ಕಂಪನಿಗಳ ವಿರುದ್ಧ ಕ್ರಮದ ಜತೆಗೆ ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಈರುಳ್ಳಿ ಬೆಳೆಗಾರರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿದರು.</p>.<p>ಕರ್ನಾಟಕ ರಾಜ್ಯ ಈರುಳ್ಳಿ ಬೆಳೆಗಾರರ ಸಂಘದ ಅಧ್ಯಕ್ಷ ಎನ್.ಎಂ.ಸಿದ್ದೇಶ್. ಉಪಾಧ್ಯಕ್ಷ ಕರಡಿ ಶಾಂತಕುಮಾರ್ ಚಪ್ಪರದಹಳ್ಳಿ. ಜಿಲ್ಲಾ ಘಟಕದ ಅಧ್ಯಕ್ಷ ಕೊಚ್ಚಾಲಿ ಮಂಜುನಾಥ್ ಅವರ ನೇತೃತ್ವದಲ್ಲಿ ಜಿಲ್ಲಾದಿಕಾರಿ ಎಂ.ಎಂ.ದಿವಾಕರ್ ಅವರನ್ನು ನಿಯೋಗ ಭೇಟಿ ಮಾಡಿ, ಸಿಎಂಗೆ ಮನವಿ ಸಲ್ಲಿಸಿತು.</p>.<p>‘ಕಳಸಾ’ ಮತ್ತು ‘ಪ್ರೇಮ’ ಎಂಬ ಬೀಜ ಕಂಪನಿಗಳು ರೈತರಿಗೆ ಪೂರೈಸಿದ ಈರುಳ್ಳಿ ಬೀಜ ಕಳಪೆಯಾಗಿದ್ದವು. ಇದರ ಬಗ್ಗೆ ಸಮಗ್ರ ತನಿಖೆ ನಡೆದಿ ಕಂಪನಿಗಳು ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಹಾಗೂ ರೈತರಿಗೆ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು.</p>.<p>ದರ ಕುಸಿತ: ಈರುಳ್ಳಿ ದರ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಸರ್ಕಾರ ₹4,000 ಬೆಂಬಲ ಬೆಲೆ ಘೋಷಿಸಬೇಕು ಮತ್ತು ಎಲ್ಲಾ ತಾಲ್ಲೂಕುಗಳಲ್ಲಿ ಖರೀದಿ ಕೇಂದ್ರ ತೆರೆಯಬೇಕು. ಯೂರಿಯಾ ಗೊಬ್ಬರ ಕೊರತೆಯನ್ನು ನೀಗಿಸಬೇಕು ಎಂದು ಸಹ ಮನವಿಯಲ್ಲಿ ವಿನಂತಿ ಮಾಡಲಾಯಿತು.</p>.<p>ಕರ್ನಾಟಕ ರಾಜ್ಯ ರೈತ ಸಂಘ ಪ್ರದಾನ ಕಾರ್ಯದರ್ಶಿ ಜಿ.ಮಲ್ಲಿಕಾರ್ಜುನ್. ದೊಡ್ಡಬಸಪ್ಪ ಬ್ಯಾಲಾಳ್ ಹಗರಿಬೊಮ್ಮನಹಳ್ಳಿ. ಅಲಬೂರು ಗ ದೇವಪ್ಪ, ವರಕೇರಿ ಹನುಮಂತಪ್ಪ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>