<p><strong>ಹೊಸಪೇಟೆ (ವಿಜಯನಗರ):</strong> ಕೇಂದ್ರ ಸರ್ಕಾರ ಹಿಂದಿ ಭಾಷೆ ಹೇರುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ನಗರದ ರಾಷ್ಟ್ರೀಕೃತ ಬ್ಯಾಂಕುಗಳ ಎದುರು ಸೇರಿ ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಹಿಂದಿ ವೈಭವೀಕರಣ ಸಲ್ಲದು ಎಂದು ಸಿಟ್ಟು ಹೊರಹಾಕಿದರು.</p>.<p>ವೇದಿಕೆಯ ಜಿಲ್ಲಾ ಅಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ ಮಾತನಾಡಿ, ‘ಹಿಂದಿ ರಾಷ್ಟ್ರೀಯ ಭಾಷೆಯಲ್ಲ. ಆದರೆ, ಕೇಂದ್ರ ಸರ್ಕಾರ ಜನರ ದಿಕ್ಕು ತಪ್ಪಿಸುತ್ತಿದೆ. ಭಾರತದಲ್ಲಿ ಯಾವ ಭಾಷೆಯೂ ಮೇಲು, ಕೀಳಲ್ಲ. ಎಲ್ಲಾ ಭಾಷೆಗಳಿಗೆ ಸಮಾನ ಆದ್ಯತೆ ಸಿಗಬೇಕು’ ಎಂದರು.</p>.<p>ಉಪಾಧ್ಯಕ್ಷ ಆರ್ಮುಗಮ್, ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ಅಧ್ಯಕ್ಷ ಎಸ್.ಎಂ.ಜಾಫರ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಪದಾಧಿಕಾರಿಗಳಾದ ಗುಜ್ಜಲ್ ಹುಲುಗಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀದೇವಿ, ಸುವರ್ಣರತ್ನ, ವಿರೂಪಾಕ್ಷಿ, ಲತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಕೇಂದ್ರ ಸರ್ಕಾರ ಹಿಂದಿ ಭಾಷೆ ಹೇರುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ನಗರದ ರಾಷ್ಟ್ರೀಕೃತ ಬ್ಯಾಂಕುಗಳ ಎದುರು ಸೇರಿ ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಹಿಂದಿ ವೈಭವೀಕರಣ ಸಲ್ಲದು ಎಂದು ಸಿಟ್ಟು ಹೊರಹಾಕಿದರು.</p>.<p>ವೇದಿಕೆಯ ಜಿಲ್ಲಾ ಅಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ ಮಾತನಾಡಿ, ‘ಹಿಂದಿ ರಾಷ್ಟ್ರೀಯ ಭಾಷೆಯಲ್ಲ. ಆದರೆ, ಕೇಂದ್ರ ಸರ್ಕಾರ ಜನರ ದಿಕ್ಕು ತಪ್ಪಿಸುತ್ತಿದೆ. ಭಾರತದಲ್ಲಿ ಯಾವ ಭಾಷೆಯೂ ಮೇಲು, ಕೀಳಲ್ಲ. ಎಲ್ಲಾ ಭಾಷೆಗಳಿಗೆ ಸಮಾನ ಆದ್ಯತೆ ಸಿಗಬೇಕು’ ಎಂದರು.</p>.<p>ಉಪಾಧ್ಯಕ್ಷ ಆರ್ಮುಗಮ್, ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ಅಧ್ಯಕ್ಷ ಎಸ್.ಎಂ.ಜಾಫರ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಪದಾಧಿಕಾರಿಗಳಾದ ಗುಜ್ಜಲ್ ಹುಲುಗಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀದೇವಿ, ಸುವರ್ಣರತ್ನ, ವಿರೂಪಾಕ್ಷಿ, ಲತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>