ಅವಳಿ ಜಿಲ್ಲೆಯ ಹೊಸಪೇಟೆ, ಕಂಪ್ಲಿ, ಸಿರುಗುಪ್ಪ, ಕುರುಗೋಡು, ಬಳ್ಳಾರಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಬೆಳೆಯಲಾಗುತ್ತದೆ. ಒಂದು ಅಂದಾಜಿನ ಪ್ರಕಾರ, ಒಂದುವರೆ ಲಕ್ಷ ಹೆಕ್ಟೇರ್ಗೂ ಅಧಿಕ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತದೆ. ಈ ಸಲ ಭತ್ತದ ಇಳುವರಿ ಉತ್ತಮವಾಗಿ ಬಂದಿದೆ. ಆದರೆ, ರೈತರಿಗೆ ಅದನ್ನು ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ. ಸತತ ಮಳೆ ಕಾಟದಿಂದ ರೈತರಿಗೆ ಅದನ್ನು ಸಂಗ್ರಹಿಸಿಡುವುದು ಬಹಳ ಕಷ್ಟವಾಗುತ್ತಿದೆ.