<p><strong>ಹರಪನಹಳ್ಳಿ (ವಿಜಯನಗರ ಜಿಲ್ಲೆ)</strong>: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜ ಆತಿಥ್ಯ ಕೊಟ್ಟಿರುವ ಪ್ರಕರಣ ಸಂಬಂಧ ಸೋಮವಾರ ಸಚಿವರು ಅಧಿಕಾರಿಗಳ ಸಭೆ ಕರೆದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. </p><p>ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಪುತ್ರ ಪಿ.ಟಿ.ಭರತ್ ಮದುವೆಗೆ ಭಾನುವಾರ ಇಲ್ಲಿಗೆ ಆಗಮಿಸಿದ್ದಾಗ ಸುದ್ದಿಗಾರರೊಂದಿಗೆ ಮಾತನಾಡಿದರು.</p>.ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ‘ವಿಲಾಸಿ ಜೀವನ’: ಮೊಬೈಲ್, ಟಿ.ವಿ ಸೌಲಭ್ಯ.<p>ಜೈಲಿನಲ್ಲಿ ಕಾನೂನು ಬಾಹಿರ ಚಟುವಟಿಕೆಗೆ ಅವಕಾಶ ಕೊಟ್ಟವರ ವಿರುದ್ಧ ಕ್ರಮ ಜರುಗಿಸಲಾಗುವುದು. ನೊಂದಣಿ ಆಗದ ಎಲ್ಲ ಸಂಘಟನೆ ನಿಷೇಧಿಸಲು ನಾವು ಹೇಳಿದ್ದೇವೆ ಹೊರತು ಬರೀ ಆರ್ಎಸ್ಎಸ್ ಎಂದು ಹೇಳಿಲ್ಲ. ಆದರೆ ಅವರೂ ಈ ರೀತಿ ಅರ್ಥಮಾಡಿಕೊಂಡರೋ ಹೇಗೆ ಹೇಳೋದು ಎಂದರು.</p><p>ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಸಂಬಂಧ ಪ್ರಕರಣ ಹೈಕೋರ್ಟ್ ನಲ್ಲಿದೆ, ತೀರ್ಪಿನಂತೆ ಕ್ರಮವಹಿಸುವುದಾಗಿ ತಿಳಿಸಿದರು.</p><p>ಮೆಕ್ಕೆಜೋಳಕ್ಕೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ಕೊಡಬೇಕು. ರಾಜ್ಯದಲ್ಲಿ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾಗಿದ್ದು ರಾಜ್ಯ ಸರ್ಕಾರ ಪರಿಹಾರ ಕೊಡುತ್ತದೆ ಎಂದು ಹೇಳಿದರು.</p><p>ಕಬ್ಬು ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಕಾರ್ಖಾನೆ ಮಾಲೀಕರು ಕೊಡುತ್ತಾರೆ ಎನ್ನುವ ವಿಶ್ವಾಸವಿದೆ. ವಿರೋಧಿಸುವ ಮಾಲೀಕರಾಗಲಿ, ಬಸನಗೌಡ ಪಾಟೀಲ್ ಯತ್ನಾಳ್ ಆಗಲಿ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.</p>.ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರ, ಪಾತಕಿ ಕೈಯಲ್ಲಿ ಸ್ಮಾರ್ಟ್ ಫೋನ್!.ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್, ಚಾಕು; ತನಿಖೆ ಶುರು: ಕಮಿಷನರ್ ಬಿ.ದಯಾನಂದ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ (ವಿಜಯನಗರ ಜಿಲ್ಲೆ)</strong>: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜ ಆತಿಥ್ಯ ಕೊಟ್ಟಿರುವ ಪ್ರಕರಣ ಸಂಬಂಧ ಸೋಮವಾರ ಸಚಿವರು ಅಧಿಕಾರಿಗಳ ಸಭೆ ಕರೆದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. </p><p>ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಪುತ್ರ ಪಿ.ಟಿ.ಭರತ್ ಮದುವೆಗೆ ಭಾನುವಾರ ಇಲ್ಲಿಗೆ ಆಗಮಿಸಿದ್ದಾಗ ಸುದ್ದಿಗಾರರೊಂದಿಗೆ ಮಾತನಾಡಿದರು.</p>.ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ‘ವಿಲಾಸಿ ಜೀವನ’: ಮೊಬೈಲ್, ಟಿ.ವಿ ಸೌಲಭ್ಯ.<p>ಜೈಲಿನಲ್ಲಿ ಕಾನೂನು ಬಾಹಿರ ಚಟುವಟಿಕೆಗೆ ಅವಕಾಶ ಕೊಟ್ಟವರ ವಿರುದ್ಧ ಕ್ರಮ ಜರುಗಿಸಲಾಗುವುದು. ನೊಂದಣಿ ಆಗದ ಎಲ್ಲ ಸಂಘಟನೆ ನಿಷೇಧಿಸಲು ನಾವು ಹೇಳಿದ್ದೇವೆ ಹೊರತು ಬರೀ ಆರ್ಎಸ್ಎಸ್ ಎಂದು ಹೇಳಿಲ್ಲ. ಆದರೆ ಅವರೂ ಈ ರೀತಿ ಅರ್ಥಮಾಡಿಕೊಂಡರೋ ಹೇಗೆ ಹೇಳೋದು ಎಂದರು.</p><p>ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಸಂಬಂಧ ಪ್ರಕರಣ ಹೈಕೋರ್ಟ್ ನಲ್ಲಿದೆ, ತೀರ್ಪಿನಂತೆ ಕ್ರಮವಹಿಸುವುದಾಗಿ ತಿಳಿಸಿದರು.</p><p>ಮೆಕ್ಕೆಜೋಳಕ್ಕೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ಕೊಡಬೇಕು. ರಾಜ್ಯದಲ್ಲಿ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾಗಿದ್ದು ರಾಜ್ಯ ಸರ್ಕಾರ ಪರಿಹಾರ ಕೊಡುತ್ತದೆ ಎಂದು ಹೇಳಿದರು.</p><p>ಕಬ್ಬು ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಕಾರ್ಖಾನೆ ಮಾಲೀಕರು ಕೊಡುತ್ತಾರೆ ಎನ್ನುವ ವಿಶ್ವಾಸವಿದೆ. ವಿರೋಧಿಸುವ ಮಾಲೀಕರಾಗಲಿ, ಬಸನಗೌಡ ಪಾಟೀಲ್ ಯತ್ನಾಳ್ ಆಗಲಿ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.</p>.ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರ, ಪಾತಕಿ ಕೈಯಲ್ಲಿ ಸ್ಮಾರ್ಟ್ ಫೋನ್!.ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್, ಚಾಕು; ತನಿಖೆ ಶುರು: ಕಮಿಷನರ್ ಬಿ.ದಯಾನಂದ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>