<p><strong>ಹಗರಿಬೊಮ್ಮನಹಳ್ಳಿ:</strong> ‘ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳು ಪ್ರತಿಯೊಬ್ಬರಿಗೂ ಆದರ್ಶವಾಗಿರಬೇಕು’ ಎಂದು ತಹಶೀಲ್ದಾರ್ ಚಂದ್ರಶೇಖರ್ ಶಂಭಣ್ಣ ಗಾಳಿ ಹೇಳಿದರು.</p>.<p>ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಮಹಾಪರಿನಿರ್ವಾಣ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಶಿಕ್ಷಣದಿಂದ ಮಾತ್ರ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ’ ಎಂದರು.</p>.<p>ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಆಂಜನೇಯ ಎಚ್. ಹುಲ್ಲಾಳ ಮಾತನಾಡಿದರು. ಸಿಡಿಪಿಒ ಸುದೀಪ್, ಶಿಕ್ಷಣ ಇಲಾಖೆಯ ಸಮನ್ವಯ ಅಧಿಕಾರಿ ಪ್ರಭಾಕರ, ದಲಿತ ಸಂಘಟನೆಗಳ ಮುಖಂಡರಾದ ಎಚ್.ದೊಡ್ಡಬಸಪ್ಪ, ಎಚ್.ಮಹೇಶ್, ಪ್ರಭಾಕರ ಇದ್ದರು.</p>.<p>ಚಿಂತ್ರಪಳ್ಳಿಯ ಅಂಬೇಡ್ಕರ್ ಭವನದಲ್ಲಿ ವಿವಿಧ ದಲಿತಪರ ಸಂಘಟನೆಗಳು ಮತ್ತು ಛಲವಾದಿ ಮಹಾಸಭಾದಿಂದ ಮುಖಂಡರು ಅಂಬೇಡ್ಕರ್ ಪುತ್ಥಳಿಗೆ ನಮನ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ:</strong> ‘ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳು ಪ್ರತಿಯೊಬ್ಬರಿಗೂ ಆದರ್ಶವಾಗಿರಬೇಕು’ ಎಂದು ತಹಶೀಲ್ದಾರ್ ಚಂದ್ರಶೇಖರ್ ಶಂಭಣ್ಣ ಗಾಳಿ ಹೇಳಿದರು.</p>.<p>ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಮಹಾಪರಿನಿರ್ವಾಣ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಶಿಕ್ಷಣದಿಂದ ಮಾತ್ರ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ’ ಎಂದರು.</p>.<p>ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಆಂಜನೇಯ ಎಚ್. ಹುಲ್ಲಾಳ ಮಾತನಾಡಿದರು. ಸಿಡಿಪಿಒ ಸುದೀಪ್, ಶಿಕ್ಷಣ ಇಲಾಖೆಯ ಸಮನ್ವಯ ಅಧಿಕಾರಿ ಪ್ರಭಾಕರ, ದಲಿತ ಸಂಘಟನೆಗಳ ಮುಖಂಡರಾದ ಎಚ್.ದೊಡ್ಡಬಸಪ್ಪ, ಎಚ್.ಮಹೇಶ್, ಪ್ರಭಾಕರ ಇದ್ದರು.</p>.<p>ಚಿಂತ್ರಪಳ್ಳಿಯ ಅಂಬೇಡ್ಕರ್ ಭವನದಲ್ಲಿ ವಿವಿಧ ದಲಿತಪರ ಸಂಘಟನೆಗಳು ಮತ್ತು ಛಲವಾದಿ ಮಹಾಸಭಾದಿಂದ ಮುಖಂಡರು ಅಂಬೇಡ್ಕರ್ ಪುತ್ಥಳಿಗೆ ನಮನ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>