ಈ ಸಂಬಂಧ ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ, ಹಕ್ಕೊತ್ತಾಯ ಮಾಡಿದರು. ಕೇಂದ್ರ ಸರ್ಕಾರವು ಇಸ್ರೇಲ್ನೊಂದಿಗೆ ಎರಡು ಬಿಲಿಯನ್ ಡಾಲರ್ ಶಸ್ತ್ರಾಸ್ತ್ರ ಖರೀದಿ ಭಾಗವಾಗಿ ಪೆಗಾಸಸ್ ಸ್ಪೈವೇರ್ ಮೂಲಕ ದೇಶದ ಜನರ ಮೇಲೆ ಬೇಹುಗಾರಿಕೆ ನಡೆಸಿದೆ. ಇಷ್ಟೇ ಅಲ್ಲ, ರಾಜಕಾರಣಿಗಳು, ಪತ್ರಕರ್ತರು, ಬುದ್ಧಿಜೀವಿಗಳು, ಹೋರಾಟಗಾರರ ಖಾಸಗಿತನವನ್ನು ಜಾಲಾಡುತ್ತಿರುವುದು ಖಂಡನಾರ್ಹ ಎಂದು ಟೀಕಿಸಿದ್ದಾರೆ.