ನೇತಾಜಿ ಸುಭಾಷಚಂದ್ರ ಬೋಸ್ ಅವರ 125ನೇ ಜನ್ಮದಿನದ ಪ್ರಯುಕ್ತ ಶುಕ್ರವಾರ ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೇಶ ಅಭಿವೃದ್ದಿಯ ಕಡೆ ಸಾಗುವಲ್ಲಿ ರೈತರು, ಕಾರ್ಮಿಕರ ಪಾತ್ರ ಬಹು ದೊಡ್ಡದಿದೆ. ಆದರೆ, ಅಂತಹವರನ್ನೇ ಇಂದು ಕಡೆಗಣಿಸಲಾಗುತ್ತಿದೆ. ಈ ಸತ್ಯ ಎಲ್ಲರಿಗೂ ತಿಳಿಯಬೇಕು. ಆ ಮೂಲಕ ಇದರ ವಿರುದ್ಧ ಹೋರಾಟವನ್ನು ಕಟ್ಟಬೇಕಾದ ಅನಿವಾರ್ಯತೆ ಇದೆ’ ಎಂದು ತಿಳಿಸಿದರು.