<p><strong>ಕೂಡ್ಲಿಗಿ (ವಿಜಯನಗರ ಜಿಲ್ಲೆ):</strong> ತಾಲ್ಲೂಕಿನ ಪಾಲಯ್ಯನಕೋಟೆ ಕೆರೆಯ ಅಂಗಳದಲ್ಲಿ ತಾಲ್ಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಶಾಸಕ ಎನ್.ವೈ. ಗೋಪಾಲಕೃಷ್ಣ ಭಾನುವಾರ ಚಾಲನೆ ನೀಡಿದರು.<br /><br />ಕೆರೆ ತುಂಬಿಸುವ ಯೋಜನೆಗೆ ಈ ಮೊದಲು ₹ 670 ಕೋಟಿ ಅನುದಾನ ಬಿಡುಗಡೆಯಾಗಿತ್ತು. ಈಗ ಹೆಚ್ಚುವರಿಯಾಗಿ ₹ 130 ಕೋಟಿ ಅನುದಾನ ಬಂದಿದೆ. ಈ ಅನುದಾನವನ್ನು ಬಳಸಿಕೊಂಡು ತಾಲ್ಲೂಕಿನ ಎಲ್ಲಾ 74 ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಕೈಗೊಳ್ಳಲಾಗುವುದು. ಇದರಿಂದ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಬವಣೆ ನೀಗುವುದರ ಜೊತೆಗೆ ಕೊಳವೆ ಬಾವಿಗಳಲ್ಲಿ ಅಂತರ್ಜಲ ಹೆಚ್ಚಾಗಿ ಸಣ್ಣ ರೈತರಿಗೆ ಹೆಚ್ಚಿನ ಲಾಭವಾಗಲಿದೆ ಎಂದರು.<br /><br />ಕೊಟ್ಟೂರು ಹಾಗೂ ಕೂಡ್ಲಿಗಿ ಎರಡು ತಾಲ್ಲೂಕುಗಳ ಸಾರ್ವಜನಿಕರ ಹಿತದೃಷ್ಟಿಯಿಂದ ಸಮಾನಾಂತರವಾಗಿ ಅಭಿವೃದ್ಧಿ ಹೊಂದಬೇಕು. ಇದಕ್ಕಾಗಿ ಶಾಸಕ ಭೀಮಾ ನಾಯ್ಕ ಅವರೊಂದಿಗೆ ಸಮನ್ವಯದೊಂದಿಗೆ ಕೆಲಸ ಮಾಡುತ್ತೇವೆ ಎಂದರು. ಈ ಯೋಜನೆ ಅನುಷ್ಠಾನದ ಹೊಣೆಯನ್ನು ಹೂವಿನಹಡಗಲಿಯಲ್ಲಿನ ಕರ್ನಾಟಕ ನೀರಾವರಿ ನಿಗಮದ ಸಿಂಗಟಾಲೂರು ಏತ ನೀರಾವರಿ ಯೋಜನೆಯ 2ನೇ ವಿಭಾಗದ ಅಧಿಕಾರಿಗಳಿಗೆ ವಹಿಸಲಾಗಿದೆ. ಮುಂಡರಗಿಯಲ್ಲಿನ ಸಣ್ಣ ನೀರಾವರಿ ನಿಗಮದ ಕೆಲ ಅಧಿಕಾರಿಗಳು ಈ ಯೋಜನೆಯ ಉಸ್ತುವಾರಿ ತಮಗೆ ವಹಿಸುವಂತೆ ಒತ್ತಡ ಹೇರುತ್ತಿದ್ದಾರೆ. ಒಂದು ವೇಳೆ ಈ ಯೋಜನೆಯ ಉಸ್ತುವಾರಿಯನ್ನು ಮುಂಡರಗಿ ವಿಭಾಗಕ್ಕೆ ವಹಿಸಿದರೆ ಅಲ್ಲಿಂದ ತಾಂತ್ರಿಕವಾಗಿ ಯೋಜನೆಯ ಸಾಧಕ ಭಾದಕಗಳನ್ನು ನಿರ್ವಹಣೆ ಮಾಡುವುದು ಕಷ್ಟವಾಗುತ್ತದೆ ಎಂದರು.<br /><br />ಜಿಲ್ಲಾ ಪಂಚಾಯ್ತಿ ಸದಸ್ಯ ಎಂ.ಎಂ.ಜೆ. ಹರ್ಷವರ್ಧನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡ್ಲಿಗಿ (ವಿಜಯನಗರ ಜಿಲ್ಲೆ):</strong> ತಾಲ್ಲೂಕಿನ ಪಾಲಯ್ಯನಕೋಟೆ ಕೆರೆಯ ಅಂಗಳದಲ್ಲಿ ತಾಲ್ಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಶಾಸಕ ಎನ್.ವೈ. ಗೋಪಾಲಕೃಷ್ಣ ಭಾನುವಾರ ಚಾಲನೆ ನೀಡಿದರು.<br /><br />ಕೆರೆ ತುಂಬಿಸುವ ಯೋಜನೆಗೆ ಈ ಮೊದಲು ₹ 670 ಕೋಟಿ ಅನುದಾನ ಬಿಡುಗಡೆಯಾಗಿತ್ತು. ಈಗ ಹೆಚ್ಚುವರಿಯಾಗಿ ₹ 130 ಕೋಟಿ ಅನುದಾನ ಬಂದಿದೆ. ಈ ಅನುದಾನವನ್ನು ಬಳಸಿಕೊಂಡು ತಾಲ್ಲೂಕಿನ ಎಲ್ಲಾ 74 ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಕೈಗೊಳ್ಳಲಾಗುವುದು. ಇದರಿಂದ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಬವಣೆ ನೀಗುವುದರ ಜೊತೆಗೆ ಕೊಳವೆ ಬಾವಿಗಳಲ್ಲಿ ಅಂತರ್ಜಲ ಹೆಚ್ಚಾಗಿ ಸಣ್ಣ ರೈತರಿಗೆ ಹೆಚ್ಚಿನ ಲಾಭವಾಗಲಿದೆ ಎಂದರು.<br /><br />ಕೊಟ್ಟೂರು ಹಾಗೂ ಕೂಡ್ಲಿಗಿ ಎರಡು ತಾಲ್ಲೂಕುಗಳ ಸಾರ್ವಜನಿಕರ ಹಿತದೃಷ್ಟಿಯಿಂದ ಸಮಾನಾಂತರವಾಗಿ ಅಭಿವೃದ್ಧಿ ಹೊಂದಬೇಕು. ಇದಕ್ಕಾಗಿ ಶಾಸಕ ಭೀಮಾ ನಾಯ್ಕ ಅವರೊಂದಿಗೆ ಸಮನ್ವಯದೊಂದಿಗೆ ಕೆಲಸ ಮಾಡುತ್ತೇವೆ ಎಂದರು. ಈ ಯೋಜನೆ ಅನುಷ್ಠಾನದ ಹೊಣೆಯನ್ನು ಹೂವಿನಹಡಗಲಿಯಲ್ಲಿನ ಕರ್ನಾಟಕ ನೀರಾವರಿ ನಿಗಮದ ಸಿಂಗಟಾಲೂರು ಏತ ನೀರಾವರಿ ಯೋಜನೆಯ 2ನೇ ವಿಭಾಗದ ಅಧಿಕಾರಿಗಳಿಗೆ ವಹಿಸಲಾಗಿದೆ. ಮುಂಡರಗಿಯಲ್ಲಿನ ಸಣ್ಣ ನೀರಾವರಿ ನಿಗಮದ ಕೆಲ ಅಧಿಕಾರಿಗಳು ಈ ಯೋಜನೆಯ ಉಸ್ತುವಾರಿ ತಮಗೆ ವಹಿಸುವಂತೆ ಒತ್ತಡ ಹೇರುತ್ತಿದ್ದಾರೆ. ಒಂದು ವೇಳೆ ಈ ಯೋಜನೆಯ ಉಸ್ತುವಾರಿಯನ್ನು ಮುಂಡರಗಿ ವಿಭಾಗಕ್ಕೆ ವಹಿಸಿದರೆ ಅಲ್ಲಿಂದ ತಾಂತ್ರಿಕವಾಗಿ ಯೋಜನೆಯ ಸಾಧಕ ಭಾದಕಗಳನ್ನು ನಿರ್ವಹಣೆ ಮಾಡುವುದು ಕಷ್ಟವಾಗುತ್ತದೆ ಎಂದರು.<br /><br />ಜಿಲ್ಲಾ ಪಂಚಾಯ್ತಿ ಸದಸ್ಯ ಎಂ.ಎಂ.ಜೆ. ಹರ್ಷವರ್ಧನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>