ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

29ರಂದು ಹೊಸಪೇಟೆಗೆ ಪ್ರಧಾನಿ ಮೋದಿ ಭೇಟಿ

Published 24 ಏಪ್ರಿಲ್ 2024, 15:28 IST
Last Updated 24 ಏಪ್ರಿಲ್ 2024, 15:28 IST
ಅಕ್ಷರ ಗಾತ್ರ

ಹೊಸಪೇಟೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇದೇ 29ರಂದು ಇಲ್ಲಿನ ಪುನೀತ್‌ ರಾಜ್‌ಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಬಳ್ಳಾರಿ ಕ್ಷೇತ್ರದ ಅಭ್ಯರ್ಥಿ ಬಿ.ಶ್ರೀರಾಮುಲು ಮತ್ತು ಕೊಪ್ಪಳ ಕ್ಷೇತ್ರದ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್  ಪರವಾಗಿ ಪ್ರಚಾರ ಭಾಷಣ ಮಾಡಲಿದ್ದಾರೆ.

ಪ್ರಧಾನಿ ಮೋದಿ ಅವರ ಪ್ರಚಾರ ಸಭೆಯ ಬಗ್ಗೆ ಬುಧವಾರ ಸಂಜೆ ದೃಢಪಟ್ಟ ತಕ್ಷಣ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.

‘ಪ್ರಧಾನಿ ಅವರು ಹೊಸಪೇಟೆಯಲ್ಲಿ 29ರಂದು ಬೆಳಿಗ್ಗೆ ಪ್ರಚಾರ ಸಭೆ ನಡೆಸುವುದು ದೃಢಪಟ್ಟಿದೆ. ಹೀಗಾಗಿ ತರಾತುರಿಯಲ್ಲಿ ವೇದಿಕೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದೇವೆ. ಆ ದಿನ ಅವರ ಇತರ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಇಲ್ಲ’ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ್‌ ‘ಪ್ರಜಾವಾಣಿ’ಗೆ ತಿಳಿಸಿದರು.‌

ಕೊಪ್ಪಳದಲ್ಲಿ ಪ್ರಧಾನಿ ಅವರ ಪ್ರಚಾರ ಸಭೆ ನಡೆಸುವ ಕುರಿತು ಮೊದಲು ಚಿಂತಿಸಲಾಗಿತ್ತು. ಬಳಿಕ ಅದನ್ನು ಹೊಸಪೇಟೆಗೆ ಬದಲಾಯಿಸಲಾಯಿತು ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT