<p><strong>ಹೊಸಪೇಟೆ (ವಿಜಯನಗರ):</strong> 'ನಮ್ಮ ಪೊಲೀಸ್, ನಮ್ಮ ಹೆಮ್ಮೆ' ಘೋಷವಾಕ್ಯದೊಂದಿಗೆ ರಾಜ್ಯದ ಎಲ್ಲೆಡೆಯಂತೆ ನಗರದಲ್ಲಿ ಸಹ ಭಾನುವಾರ ಮ್ಯಾರಥಾನ್ ನಡೆದಿದ್ದು, ವಿದೇಶಿಯರು ಸಹಿತ ಸಾವಿರಾರು ಮಂದಿ ಪಾಲ್ಗೊಳ್ಳುವ ಮೂಲಕ ಭರ್ಜರಿ ಸ್ಪಂದನ ವ್ಯಕ್ತವಾಯಿತು.</p><p>ತುಂಗಭದ್ರಾ ಅಣೆಕಟ್ಟೆಯ ಮಾಡೆಲ್ ರೂಂ ಸಮೀಪದಿಂದ ಆರಂಭವಾದ 5 ಕಿ.ಮೀ. ದೂರದ ಮ್ಯಾರಥಾನ್ ಸಾಯಿಬಾಬಾ ವೃತ್ತದಲ್ಲಿ ಕೊನೆಗೊಂಡಿತು. ಶಾಸಕ ಎಚ್.ಆರ್.ಗವಿಯಪ್ಪ ಮ್ಯಾರಥಾನ್ ಗೆ ಚಾಲನೆ ನೀಡಿದ್ದರು.</p><p>ಹಂಪಿಗೆ ಪ್ರವಾಸ ಬಂದಿದ್ದ ಸ್ವೀಡನ್ ನ ಫ್ರೀಡಾ ಅವರು ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಪ್ರಶಂಸೆಗೆ ಪಾತ್ರವಾದರು. ಡಿ.ಸುವರ್ಣ ದ್ವಿತೀಯ, ಉಷಾ ರೋಹಿಣಿ ತೃತೀಯ ಸ್ಥಾನ ಪಡೆದರು.</p><p>ಪುರುಷರ ವಿಭಾಗದಲ್ಲಿ ಜಿ.ವಿನಯ್ ಪ್ರಥಮ, ಕೆ.ಮಂಜುನಾಥ ದ್ವಿತೀಯ, ಸ್ವೀಡನ್ ನ ಜೋಹನ್ ತೃತೀಯ ಸ್ಥಾನ ಗಳಿಸಿದರು.</p><p>ಅಧಿಕಾರಿಗಳ ವಿಭಾಗದಲ್ಲಿ ವಿಕಾಸ್ ಲಮಾಣಿ ಪ್ರಥಮ ಸ್ಥಾನ ಗಳಿಸಿದರು.</p><p>50 ಮಂದಿಗೆ ಪದಕ, ಪ್ರಮಾಣಪತ್ರ ವಿತರಿಸಿ ಮಾತನಾಡಿದ ಎಸ್ಪಿ ಶ್ರೀಹರಿಬಾಬು ಬಿ.ಎಲ್., ಸೈಬರ್ ಅಪರಾಧಗಳ ಕುರಿತು ಜನ ಎಚ್ಚರದಿಂದ ಇರಬೇಕು ಎಂದರು.</p><p>ಡಿಜಿಟಲ್ ಆರೆಸ್ಟ್ ಕುರಿತೂ ಈಚಿನ ದಿನಗಳಲ್ಲಿ ಕೇಳಿಬರುತ್ತಿರುವ ಆತಂಕ, ಇದರ ಬಗ್ಗೆ ಸಹ ಜನ ಬಹಳ ಎಚ್ಚರಿಕೆಯಿಂದ ಇರಬೇಕು ಎಂದರು.</p><p>ಡ್ರಗ್ಸ್ ಗೆ ಹೇಳಿ ವಿದಾಯ, ಜೀವನಕ್ಕೆ ಹೇಳಿ ಜೈಕಾರ ಎಂದು ಹೇಳಿದರು.</p><p>ಎಎಸ್ಪಿ ಸಲೀಂ ಪಾಷಾ, ಆರ್ಟಿಒ ವಸಂತ ಚವಾಣ್, ಮುನಿರಾಬಾದ್ ಐಆರ್ಬಿ ಕಮಾಂಡೆಂಟ್ ಬಿ.ಎಂ.ಪ್ರಸಾದ್ ಇದ್ದರು.</p><p>ಜಿಲ್ಲೆಯ ವಿವಿಧ ಕಡೆಗಳಿಂದ ಕಾಲೇಜು ವಿದ್ಯಾರ್ಥಿಗಳು ಬಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> 'ನಮ್ಮ ಪೊಲೀಸ್, ನಮ್ಮ ಹೆಮ್ಮೆ' ಘೋಷವಾಕ್ಯದೊಂದಿಗೆ ರಾಜ್ಯದ ಎಲ್ಲೆಡೆಯಂತೆ ನಗರದಲ್ಲಿ ಸಹ ಭಾನುವಾರ ಮ್ಯಾರಥಾನ್ ನಡೆದಿದ್ದು, ವಿದೇಶಿಯರು ಸಹಿತ ಸಾವಿರಾರು ಮಂದಿ ಪಾಲ್ಗೊಳ್ಳುವ ಮೂಲಕ ಭರ್ಜರಿ ಸ್ಪಂದನ ವ್ಯಕ್ತವಾಯಿತು.</p><p>ತುಂಗಭದ್ರಾ ಅಣೆಕಟ್ಟೆಯ ಮಾಡೆಲ್ ರೂಂ ಸಮೀಪದಿಂದ ಆರಂಭವಾದ 5 ಕಿ.ಮೀ. ದೂರದ ಮ್ಯಾರಥಾನ್ ಸಾಯಿಬಾಬಾ ವೃತ್ತದಲ್ಲಿ ಕೊನೆಗೊಂಡಿತು. ಶಾಸಕ ಎಚ್.ಆರ್.ಗವಿಯಪ್ಪ ಮ್ಯಾರಥಾನ್ ಗೆ ಚಾಲನೆ ನೀಡಿದ್ದರು.</p><p>ಹಂಪಿಗೆ ಪ್ರವಾಸ ಬಂದಿದ್ದ ಸ್ವೀಡನ್ ನ ಫ್ರೀಡಾ ಅವರು ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಪ್ರಶಂಸೆಗೆ ಪಾತ್ರವಾದರು. ಡಿ.ಸುವರ್ಣ ದ್ವಿತೀಯ, ಉಷಾ ರೋಹಿಣಿ ತೃತೀಯ ಸ್ಥಾನ ಪಡೆದರು.</p><p>ಪುರುಷರ ವಿಭಾಗದಲ್ಲಿ ಜಿ.ವಿನಯ್ ಪ್ರಥಮ, ಕೆ.ಮಂಜುನಾಥ ದ್ವಿತೀಯ, ಸ್ವೀಡನ್ ನ ಜೋಹನ್ ತೃತೀಯ ಸ್ಥಾನ ಗಳಿಸಿದರು.</p><p>ಅಧಿಕಾರಿಗಳ ವಿಭಾಗದಲ್ಲಿ ವಿಕಾಸ್ ಲಮಾಣಿ ಪ್ರಥಮ ಸ್ಥಾನ ಗಳಿಸಿದರು.</p><p>50 ಮಂದಿಗೆ ಪದಕ, ಪ್ರಮಾಣಪತ್ರ ವಿತರಿಸಿ ಮಾತನಾಡಿದ ಎಸ್ಪಿ ಶ್ರೀಹರಿಬಾಬು ಬಿ.ಎಲ್., ಸೈಬರ್ ಅಪರಾಧಗಳ ಕುರಿತು ಜನ ಎಚ್ಚರದಿಂದ ಇರಬೇಕು ಎಂದರು.</p><p>ಡಿಜಿಟಲ್ ಆರೆಸ್ಟ್ ಕುರಿತೂ ಈಚಿನ ದಿನಗಳಲ್ಲಿ ಕೇಳಿಬರುತ್ತಿರುವ ಆತಂಕ, ಇದರ ಬಗ್ಗೆ ಸಹ ಜನ ಬಹಳ ಎಚ್ಚರಿಕೆಯಿಂದ ಇರಬೇಕು ಎಂದರು.</p><p>ಡ್ರಗ್ಸ್ ಗೆ ಹೇಳಿ ವಿದಾಯ, ಜೀವನಕ್ಕೆ ಹೇಳಿ ಜೈಕಾರ ಎಂದು ಹೇಳಿದರು.</p><p>ಎಎಸ್ಪಿ ಸಲೀಂ ಪಾಷಾ, ಆರ್ಟಿಒ ವಸಂತ ಚವಾಣ್, ಮುನಿರಾಬಾದ್ ಐಆರ್ಬಿ ಕಮಾಂಡೆಂಟ್ ಬಿ.ಎಂ.ಪ್ರಸಾದ್ ಇದ್ದರು.</p><p>ಜಿಲ್ಲೆಯ ವಿವಿಧ ಕಡೆಗಳಿಂದ ಕಾಲೇಜು ವಿದ್ಯಾರ್ಥಿಗಳು ಬಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>