ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಡಿ ಪ್ರಕರಣ: ಯುವತಿಯ ಸಂಬಂಧಿಕರ ಮನೆಗೆ ನೋಟಿಸ್ ಅಂಟಿಸಿದ ಪೊಲೀಸರು

Last Updated 14 ಮಾರ್ಚ್ 2021, 13:20 IST
ಅಕ್ಷರ ಗಾತ್ರ

ವಿಜಯಪುರ: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಂತ್ರಸ್ತ ಯುವತಿಗೆ ನೀಡಿರುವ ನೋಟಿಸ್ ಅನ್ನುಸಂತ್ರಸ್ತೆಯ ತಾಯಿಯ ತವರು ಮನೆಯ ಬಾಗಿಲಿಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಅಂಟಿಸಿದ್ದಾರೆ.

ಮನೆಗೆ ಬೀಗ ಹಾಕಿದ್ದು, ನೋಟಿಸ್ ಅನ್ನು ಬಾಗಿಲಿಗೆ ಅಂಟಿಸಿದ್ದಾರೆ.

ವಿಡಿಯೊ ಬಹಿರಂಗವಾಗುವುದಕ್ಕೂ ಮುನ್ನವೇ ಕುಟುಂಬ ಸದಸ್ಯರು ಮನೆಗೆ ಬೀಗಹಾಕಿ ಬೇರೆಡೆಗೆ ಹೋಗಿದ್ದಾರೆ.

ದಿನೇಶ್ ಕಲ್ಲಹಳ್ಳಿ ದಾಖಲಿಸಿದ್ದ ದೂರಿನ ವಿಚಾರಣೆ ಚಾಲ್ತಿಯಲಿದ್ದು, ಈ ಬಗ್ಗೆ ನಿಮ್ಮ ಹೇಳಿಕೆ ಪಡೆಯಬೇಕಾಗಿರುವುದರಿಂದ ನೋಟಿಸ್ ನೋಡಿದ ಕೂಡಲೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿರುವ ಪೊಲೀಸ್ ಅಧಿಕಾರಿ ಮೊಬೈಲ್ ಸಂಖ್ಯೆಗೆ ಕರೆ ಮಾಡುವಂತೆ ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT