ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂರಕ್ಕೆ ನೂರು ಹಾನಗಲ್ ಕ್ಷೇತ್ರ ಗೆಲ್ಲುತ್ತೇವೆ: ಸಚಿವ ಬಿ.ಸಿ.ಪಾಟೀಲ ವಿಶ್ವಾಸ

Last Updated 3 ಅಕ್ಟೋಬರ್ 2021, 12:03 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ನೂರಕ್ಕೆ ನೂರು ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುತ್ತೇವೆ. ಬಿಜೆಪಿ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ವಿಜಯನಗರ ಜಿಲ್ಲಾ ಉತ್ಸವದ ನಿಮಿತ್ತ ಭಾನುವಾರ ಸಂಜೆ ಇಲ್ಲಿ ಹಮ್ಮಿಕೊಂಡಿದ್ದ ಎತ್ತಿನ ಬಂಡಿಗಳ‌ ಮೆರವಣಿಗೆಗೆ ನಗರದ ಎಪಿಎಂಸಿ ಬಳಿ ಚಾಲನೆ ನೀಡಿ ಮಾತನಾಡಿದರು.

ದಿವಂಗತ ಸಿ.ಎಂ. ಉದಾಸಿ ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರ ಕೆಲಸಗಳು ಜನರ ನೆನಪಿನಲ್ಲಿ ಇವೆ. ಖಂಡಿತವಾಗಿ ಬಿಜೆಪಿ ಈ ಕ್ಷೇತ್ರದಲ್ಲಿ ಜಯ ಸಾಧಿಸುತ್ತದೆ' ಎಂದು ಪ್ರತಿಕ್ರಿಯಿಸಿದರು.

ಪಕ್ಷದ ವರಿಷ್ಠರು ಎರಡ್ಮೂರು ದಿನಗಳಲ್ಲಿ ಅಭ್ಯರ್ಥಿ ಹೆಸರು ಅಂತಿಮಗೊಳಿಸುತ್ತಾರೆ. ಯಾರೇ ಅಭ್ಯರ್ಥಿಯಾದರೂ ಅವರ ಜಯ ನಿಶ್ಚಯ ಎಂದು ಹೇಳಿದರು.

ವಿಜಯನಗರ ಜಿಲ್ಲೆ ಉದಯಗೊಂಡಿರುವುದು ಸಂತಸದ ವಿಷಯ. ಮತ್ತೊಮ್ಮೆ ಅದರ ಗತಕಾಲದ ವೈಭವ ಮರುಕಳಿಸಲಿದೆ ಎಂದು ತಿಳಿಸಿದರು.

ಮೆರವಣಿಗೆಯಲ್ಲಿ ಒಟ್ಟು 75 ಎತ್ತಿನ ಬಂಡಿಗಳು ಭಾಗವಹಿಸಿದ್ದು, ನಗರದ ಪ್ರಮುಖ ಮಾರ್ಗಗಳಲ್ಲಿ ಅವುಗಳ ಮೆರವಣಿಗೆ ನಡೆಯಿತು.

ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್, ಜಿಲ್ಲಾಧಿಕಾರಿ ಅನಿರುದ್ಧ್ ಪಿ. ಶ್ರವಣ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT