<p><strong>ಹೂವಿನಹಡಗಲಿ (ವಿಜಯನಗರ ಜಿಲ್ಲೆ)</strong>: ತಾಲ್ಲೂಕಿನ ಕುರುವತ್ತಿಯ ಐತಿಹಾಸಿಕ ಸುಕ್ಷೇತ್ರ ಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಟ ದರ್ಶನ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಅರ್ಚಕ ಬಸಪ್ಪ ಪೂಜಾರ್ ಅವರನ್ನು ದೇವಸ್ಥಾನ ಸಮಿತಿ ಕಾರ್ಯನಿರ್ವಾಹಕ ಅಧಿಕಾರಿ ಶಾಂತಮ್ಮ ಅಮಾನತುಗೊಳಿಸಿದ್ದಾರೆ.</p>.<p>ನಟ ದರ್ಶನ್ ಬಂಧಮುಕ್ತಗೊಳ್ಳಲಿ ಎಂದು ಪ್ರಾರ್ಥಿಸಿ ಜು.26 ರಂದು ಅಭಿಮಾನಿಗಳು ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಇದೇ ವೇಳೆ ಅಭಿಮಾನಿಗಳ ಕೋರಿಕೆ ಮೇರೆಗೆ ಅರ್ಚಕ ಬಸಪ್ಪ ಅವರು ಗರ್ಭಗುಡಿಯಲ್ಲಿರುವ ಪುರಾತನ ಬಸವಣ್ಣನ ವಿಗ್ರಹದ ಪಾದದಡಿ ದರ್ಶನ್ ಫೋಟೊ ಇರಿಸಿ ಪೂಜೆ ನೆರವೇರಿಸಿದ್ದರು. ಈ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ದೇವಸ್ಥಾನ ಸಮಿತಿಯಿಂದ ಆ.7 ರಂದು ಅರ್ಚಕರಿಗೆ ನೋಟಿಸ್ ಜಾರಿ ಮಾಡಲಾಗಿತ್ತು.</p>.<p>‘ಉದ್ದೇಶಪೂರ್ವಕವಾಗಿ ದೇವಸ್ಥಾನದ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವುದರಿಂದ ವಿಚಾರಣೆ ಕಾಯ್ದಿರಿಸಿ ಅರ್ಚಕರನ್ನು ಅಮಾನತುಗೊಳಿಸಲಾಗಿದೆ’ ಎಂದು ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ (ವಿಜಯನಗರ ಜಿಲ್ಲೆ)</strong>: ತಾಲ್ಲೂಕಿನ ಕುರುವತ್ತಿಯ ಐತಿಹಾಸಿಕ ಸುಕ್ಷೇತ್ರ ಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಟ ದರ್ಶನ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಅರ್ಚಕ ಬಸಪ್ಪ ಪೂಜಾರ್ ಅವರನ್ನು ದೇವಸ್ಥಾನ ಸಮಿತಿ ಕಾರ್ಯನಿರ್ವಾಹಕ ಅಧಿಕಾರಿ ಶಾಂತಮ್ಮ ಅಮಾನತುಗೊಳಿಸಿದ್ದಾರೆ.</p>.<p>ನಟ ದರ್ಶನ್ ಬಂಧಮುಕ್ತಗೊಳ್ಳಲಿ ಎಂದು ಪ್ರಾರ್ಥಿಸಿ ಜು.26 ರಂದು ಅಭಿಮಾನಿಗಳು ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಇದೇ ವೇಳೆ ಅಭಿಮಾನಿಗಳ ಕೋರಿಕೆ ಮೇರೆಗೆ ಅರ್ಚಕ ಬಸಪ್ಪ ಅವರು ಗರ್ಭಗುಡಿಯಲ್ಲಿರುವ ಪುರಾತನ ಬಸವಣ್ಣನ ವಿಗ್ರಹದ ಪಾದದಡಿ ದರ್ಶನ್ ಫೋಟೊ ಇರಿಸಿ ಪೂಜೆ ನೆರವೇರಿಸಿದ್ದರು. ಈ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ದೇವಸ್ಥಾನ ಸಮಿತಿಯಿಂದ ಆ.7 ರಂದು ಅರ್ಚಕರಿಗೆ ನೋಟಿಸ್ ಜಾರಿ ಮಾಡಲಾಗಿತ್ತು.</p>.<p>‘ಉದ್ದೇಶಪೂರ್ವಕವಾಗಿ ದೇವಸ್ಥಾನದ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವುದರಿಂದ ವಿಚಾರಣೆ ಕಾಯ್ದಿರಿಸಿ ಅರ್ಚಕರನ್ನು ಅಮಾನತುಗೊಳಿಸಲಾಗಿದೆ’ ಎಂದು ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>