‘ಬೆಳಿಗ್ಗೆ ಜನಜಂಗುಳಿ, ಮಧ್ಯಾಹ್ನ ಸ್ತಬ್ಧ’ ಶೀರ್ಷಿಕೆ ಅಡಿ ‘ಪ್ರಜಾವಾಣಿ’ ಭಾನುವಾರ ವರದಿ ಪ್ರಕಟಿಸಿತ್ತು. ವರದಿ ಆಧರಿಸಿ ಸ್ಥಳಕ್ಕೆ ಭೇಟಿ ನೀಡಿದ ಎಸಿ, ಡಿವೈಎಸ್ಪಿ, ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೆ ತರಕಾರಿ, ಹಣ್ಣು ಮಾರಾಟ ಮಾಡುತ್ತಿದ್ದವರು, ಅದನ್ನು ಖರೀದಿಸುತ್ತಿದ್ದ ಜನರನ್ನು ಅಲ್ಲಿಂದ ಕಳುಹಿಸಿದರು. ಜನ ಗುಂಪು ಗೂಡದಂತೆ ಪೊಲೀಸರು ಕ್ರಮ ಕೈಗೊಂಡರು.