ಜನ ಅವರ ವಾಹನಗಳನ್ನು ಕೂಡ ಕೊಂಡೊಯ್ಯುವಂತಿಲ್ಲ. ಹಂಪಿ ವಿಜಯ ವಿಠಲ ದೇವಸ್ಥಾನ, ಸಪ್ತಸ್ವರ ಮಂಟಪ ಹಾಗೂ ಕಲ್ಲಿನ ರಥ ಕಣ್ತುಂಬಿಕೊಳ್ಳಬೇಕಾದರೆ ಒಂದು ಕಿ.ಮೀ ದೂರ ನಡೆದುಕೊಂಡು ಹೋಗಬೇಕು. ಮಾರ್ಗದಲ್ಲಿ ಬೆಳಕಿನ ವ್ಯವಸ್ಥೆ ಇಲ್ಲ. ಸಂಜೆಯಾದ ನಂತರ ಚಿರತೆ, ಕರಡಿಗಳು ಓಡಾಡುತ್ತವೆ. ಯಾವುದೇ ಸುರಕ್ಷತೆ, ವ್ಯವಸ್ಥೆ ಇಲ್ಲದ ಕಾರಣ ಜನ ಸ್ಮಾರಕಗಳನ್ನು ವೀಕ್ಷಿಸದೇ ಹಿಂತಿರುಗುತ್ತಿದ್ದರು. ಇದರ ಬಗ್ಗೆ ‘ಪ್ರಜಾವಾಣಿ’ ಬೆಳಕು ಚೆಲ್ಲಿದ ನಂತರ ಪ್ರಾಧಿಕಾರದ ಆಯುಕ್ತ ಸಿದ್ದರಾಮೇಶ್ವರ ಅವರು ಖುದ್ದು ಸ್ಥಳಕ್ಕೆ ಭೇಟಿ ನೀಡಿ, ರಾತ್ರಿ 9ಗಂಟೆಯ ವರೆಗೆ ಬ್ಯಾಟರಿಚಾಲಿತ ವಾಹನಗಳಿಗೆ ವ್ಯವಸ್ಥೆ ಮಾಡಿದ್ದಾರೆ.