ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಜಾವಾಣಿ’ ವರದಿ ಫಲಶ್ರುತಿ: ಕುಡಿಯುವ ನೀರಿನ ಘಟಕ ದುರಸ್ತಿ

Last Updated 19 ಆಗಸ್ಟ್ 2021, 10:44 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕವನ್ನು ಗುರುವಾರ ದುರಸ್ತಿಗೊಳಿಸಲಾಯಿತು.

ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯು ನೀರಿನ ಘಟಕ ದುರಸ್ತಿಗೊಳಿಸಿದೆ. ಘಟಕಕ್ಕೆ ಹೊಂದಿಕೊಂಡಂತೆ ಇದ್ದ ಕೈತೊಳೆಯುವ ಜಾಗ, ನೀರಿನ ಕೊಳಾಯಿ ಕೂಡ ದುರಸ್ತಿ ಮಾಡಿಸಿದೆ. ಆ. 21ರಂದು ದೇವಾಲಯಕ್ಕೆ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಭೇಟಿ ನೀಡಲಿದ್ದಾರೆ.

‘ಹಂಪಿಯಲ್ಲಿ ಶುದ್ಧ ಕುಡಿಯುವ ನೀರಿಗೆ ಬರ’ ಶೀರ್ಷಿಕೆ ಅಡಿ ‘ಪ್ರಜಾವಾಣಿ’ ಗುರುವಾರ (ಆ.19) ವರದಿ ಪ್ರಕಟಿಸಿತ್ತು. ನೀರಿನ ಘಟಕ ಕೆಟ್ಟಿದ್ದರಿಂದ ಪ್ರವಾಸಿಗರಿಗೆ ಕುಡಿಯುವ ನೀರು ಸಿಗದೆ ತೊಂದರೆ ಅನುಭವಿಸುತ್ತಿದ್ದರು. ವರದಿ ಬೆನ್ನಲ್ಲೇ ಪುರಾತತ್ವ ಸರ್ವೇಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT