<p><strong>ಹೊಸಪೇಟೆ (ವಿಜಯನಗರ)</strong>: ಪತ್ರಕರ್ತರಿಗೆ ಸಮಾಜದಲ್ಲಿ ಮಹತ್ವದ ಸ್ಥಾನವಿದ್ದು, ಅವರಿಗೆ ಹೊಣೆಗಾರಿಕೆಯೂ ದೊಡ್ಡದಿದೆ. ಹಿರಿಯ ಪತ್ರಕರ್ತರು ಕಿರಿಯರಿಗೆ ಮಾದರಿಯಾಗಿ ಇರುವ ಅಗತ್ಯ ಇದೆ ಎಂದು ಹೊಸಪೇಟೆಯ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ರಮೇಶ್ ಬಾಬು ಬಿ.ಎನ್.ಹೇಳಿದರು.</p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ತಾಲ್ಲೂಕು ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ಮೂರನೇ ಹೆಚ್ಚುವರಿ ದಿವಾಣಿ ನ್ಯಾಯಾಧೀಶೆ ಚೈತ್ರ ಜೆ. ಮಾತನಾಡಿ, ಧೈರ್ಯ ಮತ್ತು ಸತ್ಯಕ್ಕೆ ನಿಷ್ಠರಾಗಿ ನಡೆಯುವುದು ಪತ್ರಿಕಾ ರಂಗಕ್ಕೆ ಪ್ರವೇಶಿಸುವವರು ಮೈಗೂಡಿಸಿಕೊಳ್ಳಬೇಕಾದ ಗುಣಗಳು. ತಮ್ಮ ಸ್ಥಾನಮಾನಕ್ಕೆ ಧಕ್ಕೆ ಬರದಂತೆ ಪತ್ರಕರ್ತರು ಕಾರ್ಯ ನಿರ್ವಹಿಸುವುದು ಅಗತ್ಯವಾಗಿದೆ ಎಂದರು.</p>.<p>ತಾಲ್ಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ. ಕರುಣಾನಿಧಿ ವಿಶೇಷ ಉಪನ್ಯಾಸ ನೀಡಿದರು. ಪತ್ರಕರ್ತರಿಗೆ ಅಭದ್ರತೆ ಭಾವನೆ ಮೂಡಿದರೆ ಅವರಿಂದ ಸಮರ್ಪಕ ಕೆಲಸ ನಿರೀಕ್ಷಿಸುವುದು ಸಾಧ್ಯವಿಲ್ಲ ಎಂದರು.</p>.<p>ಕೋರ್ಟ್ ನೀಡುವ ತೀರ್ಪು ಮತ್ತು ನಿರ್ಣಯಕ್ಕೆ ಇರುವ ವ್ಯತ್ಯಾಸ, ನ್ಯಾಯಾಂಗ ನಿಂದನೆ, ಪತ್ರಕರ್ತರಿಗೂ ಸ್ವಾತಂತ್ರ್ಯ ಸಹಿತ ಹಲವು ವಿಚಾರಗಳ ಬಗ್ಗೆ ಅವರು ಮಾಹಿತಿ ನೀಡಿದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ. ಸತ್ಯನಾರಾಯಣ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಕೆ.ಲಕ್ಷ್ಮಣ, ರಾಜ್ಯ ಸಮಿತಿ ಸದಸ್ಯ ಪಿ. ವೆಂಕೋಬ ನಾಯಕ ಇದ್ದರು. ಪಾಲ್ಗೊಂಡ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ)</strong>: ಪತ್ರಕರ್ತರಿಗೆ ಸಮಾಜದಲ್ಲಿ ಮಹತ್ವದ ಸ್ಥಾನವಿದ್ದು, ಅವರಿಗೆ ಹೊಣೆಗಾರಿಕೆಯೂ ದೊಡ್ಡದಿದೆ. ಹಿರಿಯ ಪತ್ರಕರ್ತರು ಕಿರಿಯರಿಗೆ ಮಾದರಿಯಾಗಿ ಇರುವ ಅಗತ್ಯ ಇದೆ ಎಂದು ಹೊಸಪೇಟೆಯ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ರಮೇಶ್ ಬಾಬು ಬಿ.ಎನ್.ಹೇಳಿದರು.</p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ತಾಲ್ಲೂಕು ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ಮೂರನೇ ಹೆಚ್ಚುವರಿ ದಿವಾಣಿ ನ್ಯಾಯಾಧೀಶೆ ಚೈತ್ರ ಜೆ. ಮಾತನಾಡಿ, ಧೈರ್ಯ ಮತ್ತು ಸತ್ಯಕ್ಕೆ ನಿಷ್ಠರಾಗಿ ನಡೆಯುವುದು ಪತ್ರಿಕಾ ರಂಗಕ್ಕೆ ಪ್ರವೇಶಿಸುವವರು ಮೈಗೂಡಿಸಿಕೊಳ್ಳಬೇಕಾದ ಗುಣಗಳು. ತಮ್ಮ ಸ್ಥಾನಮಾನಕ್ಕೆ ಧಕ್ಕೆ ಬರದಂತೆ ಪತ್ರಕರ್ತರು ಕಾರ್ಯ ನಿರ್ವಹಿಸುವುದು ಅಗತ್ಯವಾಗಿದೆ ಎಂದರು.</p>.<p>ತಾಲ್ಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ. ಕರುಣಾನಿಧಿ ವಿಶೇಷ ಉಪನ್ಯಾಸ ನೀಡಿದರು. ಪತ್ರಕರ್ತರಿಗೆ ಅಭದ್ರತೆ ಭಾವನೆ ಮೂಡಿದರೆ ಅವರಿಂದ ಸಮರ್ಪಕ ಕೆಲಸ ನಿರೀಕ್ಷಿಸುವುದು ಸಾಧ್ಯವಿಲ್ಲ ಎಂದರು.</p>.<p>ಕೋರ್ಟ್ ನೀಡುವ ತೀರ್ಪು ಮತ್ತು ನಿರ್ಣಯಕ್ಕೆ ಇರುವ ವ್ಯತ್ಯಾಸ, ನ್ಯಾಯಾಂಗ ನಿಂದನೆ, ಪತ್ರಕರ್ತರಿಗೂ ಸ್ವಾತಂತ್ರ್ಯ ಸಹಿತ ಹಲವು ವಿಚಾರಗಳ ಬಗ್ಗೆ ಅವರು ಮಾಹಿತಿ ನೀಡಿದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ. ಸತ್ಯನಾರಾಯಣ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಕೆ.ಲಕ್ಷ್ಮಣ, ರಾಜ್ಯ ಸಮಿತಿ ಸದಸ್ಯ ಪಿ. ವೆಂಕೋಬ ನಾಯಕ ಇದ್ದರು. ಪಾಲ್ಗೊಂಡ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>