<p><strong>ಹೊಸಪೇಟೆ (ವಿಜಯನಗರ)</strong>: ‘ರಾಜ್ಯದಲ್ಲಿ ಪಕ್ಷಾತೀತವಾಗಿ ಶೇ 30ರಿಂದ 40ರಷ್ಟು ಶಾಸಕರು ಕಮಿಷನ್ ದಂಧೆಕೋರರಾಗಿದ್ದಾರೆ. ಕೆಲವರು ನೇರವಾಗಿ ಶಾಮೀಲಾಗಿದ್ದಾರೆ. ಅದರ ಭಾಗವಾಗಿಯೇ ಶಿರಹಟ್ಟಿ ಶಾಸಕರು ಸಿಕ್ಕಿಬಿದ್ದಿದ್ದಾರೆ’ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಆರೋಪಿಸಿದರು. </p>.<p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಮಗಾರಿ ಮುಗಿದ ನಂತರ ಬಿಲ್ ಪಾವತಿ ವೇಳೆ ಕಮಿಷನ್ ಪಡೆಯುವ ಕಾಲ ಹೋಗಿದೆ. ಕಾಮಗಾರಿ ಪೂಜೆಯ ಹಂತದಲ್ಲೇ ಶಾಸಕರಿಗೆ ಕಮಿಷನ್ ನೀಡಬೇಕು. ಅಧಿಕಾರಿಗಳು ಸಹ ಇದರಲ್ಲಿ ಮಧ್ಯವರ್ತಿಗಳಾಗಿದ್ದಾರೆ‘ ಎಂದು ದೂರಿದರು. </p>.<p>‘ಹಿಂದಿನ ಸರ್ಕಾರದಲ್ಲಿ ಶೇ 40ರಷ್ಟು ಕಮಿಷನ್ ಇತ್ತು, ಈ ಸರ್ಕಾರದಲ್ಲಿ ಶೇ 60ರಷ್ಟು ಕಮಿಷನ್ ದಂಧೆ ಇದೆ ಎಂದು ನಾನು ಹೇಳಿಲ್ಲ. ನನ್ನ ಮಾತು ತಿರುಚಲಾಗಿದೆ. ಆದರೆ, ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಬಳಸಿಕೊಂಡಿದ್ದು ನಿಜ’ ಎಂದರು.</p>.<p>‘ಗುತ್ತಿಗೆದಾರರ ಬಾಕಿ ಇರುವ ಬಿಲ್ ಮೊತ್ತ ₹37 ಸಾವಿರ ಕೋಟಿಯನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂಬುದಷ್ಟೇ ನಮ್ಮ ಬೇಡಿಕೆಯಾಗಿದೆ‘ ಎಂದು ಹೇಳಿದರು.</p>.<p><span class="bold"><strong>ಮಾರ್ಚ್ 6ಕ್ಕೆ ಮುಷ್ಕರ:</strong> ‘</span>ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾ.6ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಜಿಲ್ಲೆಗಳಿಂದ ಗುತ್ತಿಗೆದಾರರು ಭಾಗವಹಿಸಲಿದ್ದಾರೆ. ಬೇಡಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ಏಪ್ರಿಲ್ನಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು’ ಎಂದು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ)</strong>: ‘ರಾಜ್ಯದಲ್ಲಿ ಪಕ್ಷಾತೀತವಾಗಿ ಶೇ 30ರಿಂದ 40ರಷ್ಟು ಶಾಸಕರು ಕಮಿಷನ್ ದಂಧೆಕೋರರಾಗಿದ್ದಾರೆ. ಕೆಲವರು ನೇರವಾಗಿ ಶಾಮೀಲಾಗಿದ್ದಾರೆ. ಅದರ ಭಾಗವಾಗಿಯೇ ಶಿರಹಟ್ಟಿ ಶಾಸಕರು ಸಿಕ್ಕಿಬಿದ್ದಿದ್ದಾರೆ’ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಆರೋಪಿಸಿದರು. </p>.<p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಮಗಾರಿ ಮುಗಿದ ನಂತರ ಬಿಲ್ ಪಾವತಿ ವೇಳೆ ಕಮಿಷನ್ ಪಡೆಯುವ ಕಾಲ ಹೋಗಿದೆ. ಕಾಮಗಾರಿ ಪೂಜೆಯ ಹಂತದಲ್ಲೇ ಶಾಸಕರಿಗೆ ಕಮಿಷನ್ ನೀಡಬೇಕು. ಅಧಿಕಾರಿಗಳು ಸಹ ಇದರಲ್ಲಿ ಮಧ್ಯವರ್ತಿಗಳಾಗಿದ್ದಾರೆ‘ ಎಂದು ದೂರಿದರು. </p>.<p>‘ಹಿಂದಿನ ಸರ್ಕಾರದಲ್ಲಿ ಶೇ 40ರಷ್ಟು ಕಮಿಷನ್ ಇತ್ತು, ಈ ಸರ್ಕಾರದಲ್ಲಿ ಶೇ 60ರಷ್ಟು ಕಮಿಷನ್ ದಂಧೆ ಇದೆ ಎಂದು ನಾನು ಹೇಳಿಲ್ಲ. ನನ್ನ ಮಾತು ತಿರುಚಲಾಗಿದೆ. ಆದರೆ, ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಬಳಸಿಕೊಂಡಿದ್ದು ನಿಜ’ ಎಂದರು.</p>.<p>‘ಗುತ್ತಿಗೆದಾರರ ಬಾಕಿ ಇರುವ ಬಿಲ್ ಮೊತ್ತ ₹37 ಸಾವಿರ ಕೋಟಿಯನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂಬುದಷ್ಟೇ ನಮ್ಮ ಬೇಡಿಕೆಯಾಗಿದೆ‘ ಎಂದು ಹೇಳಿದರು.</p>.<p><span class="bold"><strong>ಮಾರ್ಚ್ 6ಕ್ಕೆ ಮುಷ್ಕರ:</strong> ‘</span>ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾ.6ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಜಿಲ್ಲೆಗಳಿಂದ ಗುತ್ತಿಗೆದಾರರು ಭಾಗವಹಿಸಲಿದ್ದಾರೆ. ಬೇಡಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ಏಪ್ರಿಲ್ನಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು’ ಎಂದು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>