ನಗರದ ಕೃಷ್ಣಮಠದಲ್ಲಿ ಗುರುವಾರ ಸಂಜೆ ರಾಘವೇಂದ್ರ ಸ್ವಾಮಿ ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಎ’ ದರ್ಜೆ ದೇವಸ್ಥಾನದ ಅರ್ಚಕರಿಗೆ ಆರನೇ ವೇತನ ಆರಂಭಿಸಲಾಗಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿನ ದೇಗುಲದ ಅರ್ಚಕರ ಆರೋಗ್ಯ ಹಿತದೃಷ್ಟಿಯಿಂದ ಆರೋಗ್ಯ ವಿಮೆ ಮಾಡಿಸಲಾಗಿದೆ. ಎಲ್ಲ ದೇವಾಲಯಗಳಲ್ಲಿ ಕುಡಿವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು ಎಂದರು.