ಕಾನಹೊಸಹಳ್ಳಿ(ವಿಜಯನಗರ): ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಆಕಸ್ಮಿಕವಾಗಿ ಖಾಸಗಿ ಬಸ್ಗೆ ಬೆಂಕಿ ಹೊತ್ತಿರುವ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.
ಬೆಂಗಳೂರಿನಿಂದ ಹಟ್ಟಿಚಿನ್ನದಗಣಿ ಕಡೆ ತೆರಳುತ್ತಿದ್ದ 'ನಾಗಶ್ರೀ' ಬಸ್ನ ಟೈರ್ ಸಿಡಿದು ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಬಸ್ ಧಗ-ಧಗನೇ ಹೊತ್ತಿ ಉರಿದಿದೆ.
ಚಾಲಕನ ಸಮಯ ಪ್ರಜ್ಞೆಯಿಂದ ಬಸ್ನಲ್ಲಿ ಸಂಚರಿಸುತ್ತಿದ್ದ 30 ಜನರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಯಾರಿಗೂ ಯಾವುದೇ ಅಪಾಯ ಆಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಕಾನಹೊಸಹಳ್ಳಿ ಪಿಎಸ್ಐ ಎರಿಯಪ್ಪ ನೇತೃತ್ವದಲ್ಲಿ ಎರಡು ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸಲಾಗಿದೆ.