ಹೊಸಪೇಟೆ (ವಿಜಯನಗರ): ಗದಗದಲ್ಲಿ ನಡೆಯಲಿರುವ ಎಂಟನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಎನ್. ಚಿನ್ನಸ್ವಾಮಿ ಸೋಸಲೆ ಆಯ್ಕೆಯಾಗಿದ್ದಾರೆ.
ದಲಿತ ಸಾಹಿತ್ಯ ಪರಿಷತ್ತಿನಿಂದ ಅಕ್ಟೋಬರ್ 10ರಂದು ಗದಗದಲ್ಲಿ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಚಿಂತಕ ಶಿವರುದ್ರ ಕಲ್ಲೋಳಕರ ಸಮ್ಮೇಳನಕ್ಕೆ ಚಾಲನೆ ನೀಡುವರು.