ಉದಯಪುರದಲ್ಲಿ ನಡೆದ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಶ್ರೀರಾಮ ಸೇನೆಯ ಕಾರ್ಯಕರ್ತರು ನಗರದ ಪಾದಗಟ್ಟೆ ಆಂಜನೇಯ ದೇವಸ್ಥಾನದ ಬಳಿ ಬೆಳಿಗ್ಗೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾಗ ಅವರನ್ನು ಪೊಲೀಸರು ಬಂಧಿಸಿ, ವೇದಿಕೆ ತೆರವುಗೊಳಿಸಿದ್ದರು. ಅದನ್ನು ವಿರೋಧಿಸಿ ಹಾಲಸ್ವಾಮೀಜಿ ನೇತೃತ್ವದಲ್ಲಿ ಕೆಲವರು ಗಾಂಧಿ ವೃತ್ತದಲ್ಲಿ ಸೇರಿ, ಬಾಯಿಗೆ ಪಟ್ಟಿ ಕಟ್ಟಿಕೊಂಡು ಧರಣಿ ನಡೆಸಿದರು.