<p><strong>ಹೊಸಪೇಟೆ(ವಿಜಯನಗರ):</strong> ಎ.ಜೆ.ಸದಾಶಿವ ಆಯೋಗದ ವರದಿ ವಿರುದ್ಧ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದವರು ಗುರುವಾರ ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು.<br /><br />ಸದಾಶಿವ ಆಯೋಗದ ವರದಿ ಏಕಪಕ್ಷೀಯವಾಗಿದೆ. ಅದರ ಶಿಫಾರಸು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು ಎಂದು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದರು.<br /><br />ಕೆಲವು ಸಮುದಾಯಗಳ ಸಾಂವಿಧಾನಿಕ ಮೀಸಲಾತಿ ಹಕ್ಕು ವಂಚಿಸಲು ಕೆಲ ರಾಜಕಾರಣಿಗಳು ಹವಣಿಸುತ್ತಿದ್ದಾರೆ. ಪರಿಶಿಷ್ಟ ಜಾತಿಗಳಲ್ಲಿ ಎಡ-ಬಲ, ಸ್ಪೃಶ್ಯ-ಅಸ್ಪೃಶ್ಯ ಶಬ್ದಗಳನ್ನು ಬಳಸಿ ಜಾತಿಗಳ ನಡುವೆ ಕಂದಕವನ್ನು ಸೃಷ್ಟಿಸುತ್ತಿದ್ದಾರೆ. ಇದು ಆತಂಕಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದರು.<br /><br />ಎ.ಜೆ.ಸದಾಶಿವ ಆಯೋಗದ ಕೆಲ ಅಂಕಿ ಅಂಶಗಳು ಬಂಜಾರ, ಭೋವಿ, ಕೊರಮ, ಕೊರಚ, ಅಲೆಮಾರಿ ಮತ್ತು ಅರೆ ಅಲೆಮಾರಿ ಜಾತಿಗಳನ್ನು ವರ್ಗೀಕರಿಸಿರುವ ವಿಧಾನ ಮತ್ತು ಬಳಸಿರುವ ಮಾನದಂಡಗಳು, ಈ ಸಮುದಾಯಗಳ ಕುರಿತ ವ್ಯಾಖ್ಯಾನ, ಸ್ಥಿತಿಗತಿಗಳ ದಾಖಲೀಕರಣ ಅಂಶಗಳು ಅಸಾಂವಿಧಾನಿಕವಾಗಿವೆ ಎಂದು ಮನವಿಯಲ್ಲಿ ದೂರಿದರು.<br /><br />ಮುಖಂಡ ಡಿ.ವೆಂಕಟರಮಣ ಮಾತನಾಡಿ, ‘ಎ.ಜೆ.ಸದಾಶಿವ ಅವರ ತಂಡ ಪರಿಶಿಷ್ಟ ಜಾತಿಯ ವಸ್ತುಸ್ಥಿತಿ ಅಧ್ಯಯನ ಮಾಡಿ ವರದಿ ನೀಡುತ್ತೇವೆ ಎಂದು ಹೇಳಿತ್ತು. ಆದರೆ, ವಾಸ್ತವದಲ್ಲಿ ಯಾವ ಜಿಲ್ಲೆಗೂ ಭೇಟಿ ನೀಡಿಲ್ಲ. ಎಡ-ಬಲ ಸ್ಪೃಶ್ಯ-ಅಸ್ಪೃಶ್ಯ ಎಂದು ವಿಂಗಡಿಸಿದೆ. ಅಂಬೇಡ್ಕರ್ ಅವರು ಎಲ್ಲಿಯೂ ಈ ಪದಗಳನ್ನು ಬಳಸಿಲ್ಲ. ಈ ರೀತಿಯಾಗಿ ವರ್ಗೀಕರಿಸಿ ಪರಿಶಿಷ್ಟರನ್ನು ವಿಂಗಡಿಸುವ ಹುನ್ನಾರ ನಡೆದಿದೆ’ ಎಂದು ಟೀಕಿಸಿದರು.<br /><br />ಒಕ್ಕೂಟದ ಮುಖಂಡರಾದ ವಿ.ತಿಪ್ಪೆಸ್ವಾಮಿ, ರಾಮಜೀ ನಾಯ್ಕ, ಹುಲುಗಪ್ಪ, ಬಸವರಾಜ್, ವಿ.ಮಹೇಶ್, ಚಿದಾನಂದ, ಗಾಳೆಪ್ಪ, ರಾಮಕೃಷ್ಣ, ರಮೇಶ್ ಇದ್ದರು.</p>.<p><strong>ಪೊಲೀಸರ ಜೊತೆ ಮಾತಿನ ಚಕಮಕಿ: </strong>ಮಹಾತ್ಮ ಗಾಂಧಿ ವೃತ್ತದಿಂದ ನಗರದ ತಹಶೀಲ್ದಾರ್ ಕಚೇರಿ ವರೆಗೆ ರ್ಯಾಲಿ ನಡೆಸಿದ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದವರು, ಅಲ್ಲಿದ್ದ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ರಸ್ತೆತಡೆಗೆ ಮುಂದಾದರು. ಅದಕ್ಕೆ ಪೊಲೀಸರು ಅವಕಾಶ ಕಲ್ಪಿಸಲಿಲ್ಲ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ತಹಶೀಲ್ದಾರ್ ಕಚೇರಿ ಎದುರು ಜಮಾಯಿಸಿ, ಮುಖಂಡರು ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ(ವಿಜಯನಗರ):</strong> ಎ.ಜೆ.ಸದಾಶಿವ ಆಯೋಗದ ವರದಿ ವಿರುದ್ಧ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದವರು ಗುರುವಾರ ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು.<br /><br />ಸದಾಶಿವ ಆಯೋಗದ ವರದಿ ಏಕಪಕ್ಷೀಯವಾಗಿದೆ. ಅದರ ಶಿಫಾರಸು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು ಎಂದು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದರು.<br /><br />ಕೆಲವು ಸಮುದಾಯಗಳ ಸಾಂವಿಧಾನಿಕ ಮೀಸಲಾತಿ ಹಕ್ಕು ವಂಚಿಸಲು ಕೆಲ ರಾಜಕಾರಣಿಗಳು ಹವಣಿಸುತ್ತಿದ್ದಾರೆ. ಪರಿಶಿಷ್ಟ ಜಾತಿಗಳಲ್ಲಿ ಎಡ-ಬಲ, ಸ್ಪೃಶ್ಯ-ಅಸ್ಪೃಶ್ಯ ಶಬ್ದಗಳನ್ನು ಬಳಸಿ ಜಾತಿಗಳ ನಡುವೆ ಕಂದಕವನ್ನು ಸೃಷ್ಟಿಸುತ್ತಿದ್ದಾರೆ. ಇದು ಆತಂಕಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದರು.<br /><br />ಎ.ಜೆ.ಸದಾಶಿವ ಆಯೋಗದ ಕೆಲ ಅಂಕಿ ಅಂಶಗಳು ಬಂಜಾರ, ಭೋವಿ, ಕೊರಮ, ಕೊರಚ, ಅಲೆಮಾರಿ ಮತ್ತು ಅರೆ ಅಲೆಮಾರಿ ಜಾತಿಗಳನ್ನು ವರ್ಗೀಕರಿಸಿರುವ ವಿಧಾನ ಮತ್ತು ಬಳಸಿರುವ ಮಾನದಂಡಗಳು, ಈ ಸಮುದಾಯಗಳ ಕುರಿತ ವ್ಯಾಖ್ಯಾನ, ಸ್ಥಿತಿಗತಿಗಳ ದಾಖಲೀಕರಣ ಅಂಶಗಳು ಅಸಾಂವಿಧಾನಿಕವಾಗಿವೆ ಎಂದು ಮನವಿಯಲ್ಲಿ ದೂರಿದರು.<br /><br />ಮುಖಂಡ ಡಿ.ವೆಂಕಟರಮಣ ಮಾತನಾಡಿ, ‘ಎ.ಜೆ.ಸದಾಶಿವ ಅವರ ತಂಡ ಪರಿಶಿಷ್ಟ ಜಾತಿಯ ವಸ್ತುಸ್ಥಿತಿ ಅಧ್ಯಯನ ಮಾಡಿ ವರದಿ ನೀಡುತ್ತೇವೆ ಎಂದು ಹೇಳಿತ್ತು. ಆದರೆ, ವಾಸ್ತವದಲ್ಲಿ ಯಾವ ಜಿಲ್ಲೆಗೂ ಭೇಟಿ ನೀಡಿಲ್ಲ. ಎಡ-ಬಲ ಸ್ಪೃಶ್ಯ-ಅಸ್ಪೃಶ್ಯ ಎಂದು ವಿಂಗಡಿಸಿದೆ. ಅಂಬೇಡ್ಕರ್ ಅವರು ಎಲ್ಲಿಯೂ ಈ ಪದಗಳನ್ನು ಬಳಸಿಲ್ಲ. ಈ ರೀತಿಯಾಗಿ ವರ್ಗೀಕರಿಸಿ ಪರಿಶಿಷ್ಟರನ್ನು ವಿಂಗಡಿಸುವ ಹುನ್ನಾರ ನಡೆದಿದೆ’ ಎಂದು ಟೀಕಿಸಿದರು.<br /><br />ಒಕ್ಕೂಟದ ಮುಖಂಡರಾದ ವಿ.ತಿಪ್ಪೆಸ್ವಾಮಿ, ರಾಮಜೀ ನಾಯ್ಕ, ಹುಲುಗಪ್ಪ, ಬಸವರಾಜ್, ವಿ.ಮಹೇಶ್, ಚಿದಾನಂದ, ಗಾಳೆಪ್ಪ, ರಾಮಕೃಷ್ಣ, ರಮೇಶ್ ಇದ್ದರು.</p>.<p><strong>ಪೊಲೀಸರ ಜೊತೆ ಮಾತಿನ ಚಕಮಕಿ: </strong>ಮಹಾತ್ಮ ಗಾಂಧಿ ವೃತ್ತದಿಂದ ನಗರದ ತಹಶೀಲ್ದಾರ್ ಕಚೇರಿ ವರೆಗೆ ರ್ಯಾಲಿ ನಡೆಸಿದ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದವರು, ಅಲ್ಲಿದ್ದ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ರಸ್ತೆತಡೆಗೆ ಮುಂದಾದರು. ಅದಕ್ಕೆ ಪೊಲೀಸರು ಅವಕಾಶ ಕಲ್ಪಿಸಲಿಲ್ಲ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ತಹಶೀಲ್ದಾರ್ ಕಚೇರಿ ಎದುರು ಜಮಾಯಿಸಿ, ಮುಖಂಡರು ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>