<p><strong>ಹೊಸಪೇಟೆ:</strong> ನಗರದ ಚಿತ್ತವಾಡ್ಗಿ ಹಾಗೂ ಸಿದ್ದಲಿಂಗಪ್ಪ ಚೌಕಿಯ ರಾಜಾಜಿನಗರದಲ್ಲಿ ಮೂಲಸೌಕರ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್ಐ) ನೇತೃತ್ವದಲ್ಲಿ ಸ್ಥಳೀಯರು ಮಂಗಳವಾರ ನಗರಸಭೆ ಎದುರು ಪ್ರತಿಭಟನೆ ನಡೆಸಿದರು.</p>.<p>ನಂತರ ನಗರಸಭೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸೈಯದ್ ಮನ್ಸೂರ್ ಅಹಮ್ಮದ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಚಿತ್ತವಾಡ್ಗಿಯಲ್ಲಿ ಗುಣಮಟ್ಟದ ಒಳಚರಂಡಿ ನಿರ್ಮಿಸಬೇಕು. ಕೊಳವೆಬಾವಿ ಪಂಪ್ ಕೆಟ್ಟು ಹೋಗಿ ಅನೇಕ ತಿಂಗಳಾದರೂ ದುರಸ್ತಿಗೊಳಿಸಿಲ್ಲ. ಕೂಡಲೇ ಅದನ್ನು ದುರಸ್ತಿಗೊಳಿಸಬೇಕು. ಖಾಜ ನಗರದ ರೈಲ್ವೆ ಗೇಟ್ ಬಳಿ ರಸ್ತೆ ಉಬ್ಬು ನಿರ್ಮಿಸಬೇಕು. ಎಲ್ಲೆಡೆ ಬೀದಿ ದೀಪಗಳನ್ನು ಹಾಕಬೇಕು ಎಂದು ಆಗ್ರಹಿಸಿದರು.</p>.<p>ಸಿದ್ದಲಿಂಗಪ್ಪ ಚೌಕಿಯ ರಾಜಾಜಿನಗರದಲ್ಲಿ ಒಳಚರಂಡಿ ರಸ್ತೆ ವೈಜ್ಞಾನಿಕವಾಗಿ ಮಾಡಿಲ್ಲ. ಇದರಿಂದಾಗಿ ಅನೇಕ ಸಮಸ್ಯೆಗಳಿಗೆ ಕಾರಣವಾಗಿದೆ. ಕಲುಷಿತ ಕುಡಿಯುವ ನೀರು ಪೂರೈಕೆಯಾಗುತ್ತಿರುವುದರಿಂದ ಜನ ನಾನಾ ರೋಗಗಳಿಗೆ ಒಳಗಾಗುತ್ತಿದ್ದಾರೆ. ಕೂಡಲೇ ಸರಿಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಡಿವೈಎಫ್ಐ ಜಿಲ್ಲಾ ಅಧ್ಯಕ್ಷ ವಿ. ಸ್ವಾಮಿ, ತಾಲ್ಲೂಕು ಅಧ್ಯಕ್ಷ ಈಡಿಗರ ಮಂಜುನಾಥ, ಮುಖಂಡರಾದ ಕಲ್ಯಾಣಯ್ಯ, ಬಿಸಾಟಿ ಮಹೇಶ, ಎಚ್. ಮೊಹಮ್ಮದ್ ಖಾಲಿದ್, ಅಲ್ತಾಫ್, ಮಾಲ್ತೇಶ್, ಜೆ. ಶಿವಕುಮಾರ, ಬಂಡೆ ತಿರುಕಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ನಗರದ ಚಿತ್ತವಾಡ್ಗಿ ಹಾಗೂ ಸಿದ್ದಲಿಂಗಪ್ಪ ಚೌಕಿಯ ರಾಜಾಜಿನಗರದಲ್ಲಿ ಮೂಲಸೌಕರ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್ಐ) ನೇತೃತ್ವದಲ್ಲಿ ಸ್ಥಳೀಯರು ಮಂಗಳವಾರ ನಗರಸಭೆ ಎದುರು ಪ್ರತಿಭಟನೆ ನಡೆಸಿದರು.</p>.<p>ನಂತರ ನಗರಸಭೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸೈಯದ್ ಮನ್ಸೂರ್ ಅಹಮ್ಮದ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಚಿತ್ತವಾಡ್ಗಿಯಲ್ಲಿ ಗುಣಮಟ್ಟದ ಒಳಚರಂಡಿ ನಿರ್ಮಿಸಬೇಕು. ಕೊಳವೆಬಾವಿ ಪಂಪ್ ಕೆಟ್ಟು ಹೋಗಿ ಅನೇಕ ತಿಂಗಳಾದರೂ ದುರಸ್ತಿಗೊಳಿಸಿಲ್ಲ. ಕೂಡಲೇ ಅದನ್ನು ದುರಸ್ತಿಗೊಳಿಸಬೇಕು. ಖಾಜ ನಗರದ ರೈಲ್ವೆ ಗೇಟ್ ಬಳಿ ರಸ್ತೆ ಉಬ್ಬು ನಿರ್ಮಿಸಬೇಕು. ಎಲ್ಲೆಡೆ ಬೀದಿ ದೀಪಗಳನ್ನು ಹಾಕಬೇಕು ಎಂದು ಆಗ್ರಹಿಸಿದರು.</p>.<p>ಸಿದ್ದಲಿಂಗಪ್ಪ ಚೌಕಿಯ ರಾಜಾಜಿನಗರದಲ್ಲಿ ಒಳಚರಂಡಿ ರಸ್ತೆ ವೈಜ್ಞಾನಿಕವಾಗಿ ಮಾಡಿಲ್ಲ. ಇದರಿಂದಾಗಿ ಅನೇಕ ಸಮಸ್ಯೆಗಳಿಗೆ ಕಾರಣವಾಗಿದೆ. ಕಲುಷಿತ ಕುಡಿಯುವ ನೀರು ಪೂರೈಕೆಯಾಗುತ್ತಿರುವುದರಿಂದ ಜನ ನಾನಾ ರೋಗಗಳಿಗೆ ಒಳಗಾಗುತ್ತಿದ್ದಾರೆ. ಕೂಡಲೇ ಸರಿಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಡಿವೈಎಫ್ಐ ಜಿಲ್ಲಾ ಅಧ್ಯಕ್ಷ ವಿ. ಸ್ವಾಮಿ, ತಾಲ್ಲೂಕು ಅಧ್ಯಕ್ಷ ಈಡಿಗರ ಮಂಜುನಾಥ, ಮುಖಂಡರಾದ ಕಲ್ಯಾಣಯ್ಯ, ಬಿಸಾಟಿ ಮಹೇಶ, ಎಚ್. ಮೊಹಮ್ಮದ್ ಖಾಲಿದ್, ಅಲ್ತಾಫ್, ಮಾಲ್ತೇಶ್, ಜೆ. ಶಿವಕುಮಾರ, ಬಂಡೆ ತಿರುಕಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>