ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪರಾಧ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಪಿಎಸ್ಐ ಗೀತಾಂಜಲಿ ಶಿಂಧೆ

Published 4 ಡಿಸೆಂಬರ್ 2023, 13:59 IST
Last Updated 4 ಡಿಸೆಂಬರ್ 2023, 13:59 IST
ಅಕ್ಷರ ಗಾತ್ರ

ಕೊಟ್ಟೂರು: ಪಟ್ಟಣದ ಸುತ್ತ ಮುತ್ತ ಇತ್ತೀಚೆಗೆ ಹೆಚ್ಚುತ್ತಿರುವ ಕಳವು ಅಪರಾಧಗಳನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ಪಿಎಸ್ಐ ಗೀತಾಂಜಲಿ ಶಿಂಧೆ ಹೇಳಿದರು.

ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಅಪರಾಧ ತಡೆಗಟ್ಟಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಮಾತನಾಡಿ, ‘ಸಭೆ ಸಮಾರಂಭಗಳಿಗೆ ಹಾಗೂ ಪರಸ್ಥಳಗಳಿಗೆ ತೆರಳುವಾಗ ಒಡವೆ, ಹಣ, ಬೆಲೆ ಬಾಳುವ ವಸ್ತುಗಳನ್ನು ಲಾಕರ್‌ಗಳಲ್ಲಿಡಬೇಕು. ಮನೆ ಹೊರಗಡೆ ವಿದ್ಯುತ್ ದೀಪಗಳನ್ನು ಹಾಕಿರಬೇಕು’ ಎಂದರು.

‘ನೀವು ಬೇರೆ ಕಡೆ ಹೋಗುವ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಬಾರದು’ ಎಂದ ಅವರು, ‘ಮುಂಜಾಗೃತಾ ಕ್ರಮಗಳನ್ನು ಕೈಗೊಂಡರೆ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT