‘ಕಾಳಪ್ಪ ಪುನೀತ್ ಅವರ ಕಟ್ಟಾ ಅಭಿಮಾನಿ. ಮಧ್ಯಾಹ್ನ ಟಿ.ವಿ.ಯಲ್ಲಿ ಪುನೀತ್ ಅವರ ನಿಧನದ ಸುದ್ದಿ ನೋಡಿ ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. ನೀರು, ಆಹಾರ ಸೇವಿಸದೆ ಸಂಜೆವರೆಗೂ ಟಿ.ವಿ. ನೋಡುತ್ತ ಕುಳಿತಿದ್ದರು. ಸಂಜೆ ತೀವ್ರ ದುಃಖಿತರಾಗಿ ಕಾಲುವೆಗೆ ಜಿಗಿದಿದ್ದರು. ಸ್ಥಳೀಯರು ಗಮನಿಸಿ ಅವರನ್ನು ರಕ್ಷಿಸಿದ್ದರು. ಪುನಃ ರಾತ್ರಿ ಮನೆಯಿಂದ ಹೋಗಿ ಕಾಲುವೆಗೆ ಜಿಗಿದಿದ್ದಾರೆ. ತುಂಬಿ ಹರಿಯುತ್ತಿದ್ದ ಕಾಲುವೆಯಲ್ಲಿ ಕೊಚ್ಚಿ ಕೊಂಡು ಹೋಗಿದ್ದಾರೆ’ ಎಂದು ಅವರ ಸ್ನೇಹಿತ ಕನ್ನೇಶ್ವರ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.