<p><strong>ಹೊಸಪೇಟೆ (ವಿಜಯನಗರ):</strong> ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಟಿ.ದೇವದಾಸ್ ಮತ್ತು ಅವರ ಕಚೇರಿಯ ಅಕೌಂಟೆಂಟ್ ಮಾರುತಿ ಅವರು ಮಂಗಳವಾರ ಇಲ್ಲಿನ ತಮ್ಮ ಕಚೇರಿಯಲ್ಲಿ ಗುತ್ತಿಗೆದಾರರೊಬ್ಬರಿಂದ ₹1 ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.</p>.ವಿಜಯನಗರ | ಟ್ರಾವೆಲ್ಲರ್ ನೂಕ್; ಮಾರ್ಚ್ 30ರ ಗಡುವು: ಡಿ.ಸಿ ಸೂಚನೆ.<p>ಹೂವಿನಹಡಗಲಿಯ ಗುತ್ತಿಗೆದಾರ ಮಹೇಶ್ ಹಲಗೇರಿ ಅವರು ಲೋಕೋಪಯೋಗಿ ಇಲಾಖೆಯ ಟೆಂಡರ್ ಮೂಲಕ ಕಾಮಗಾರಿ ಪಡೆದುಕೊಂಡು ಕಾಮಗಾರಿ ಮುಗಿಸಿದ್ದರು. ಬಿಲ್ ಮಂಜೂರಾತಿಗಾಗಿ ದೇವದಾಸ್ ಮತ್ತು ಮಾರುತಿ ಅವರು ಶೇ 10ರಷ್ಟು ಕಮಿಷನ್ ರೂಪದಲ್ಲಿ ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಯುಕ್ತಕ್ಕೆ ದೂರು ನೀಡಲಾಗಿತ್ತು. ಅದರಂತೆ ಗುತ್ತಿಗೆದಾರರು ಲಂಚ ನೀಡುತ್ತಿದ್ದಾಗ ಈ ಇಬ್ಬರೂ ಲೋಕಾಯುಕ್ತ ಬಲೆಗೆ ಬಿದ್ದರು. ಅವರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p><p>ಲೋಕಾಯುಕ್ತ ಡಿವೈಎಸ್ಪಿ ಸಚಿನ್ ಎಸ್.ಚಲವಾದಿ, ಇನ್ಸ್ಪೆಕ್ಟರ್ಗಳಾದ ರಾಜೇಶ್ ಎಸ್.ಲಮಾಣಿ, ಅಮರೇಶ್ ಹುಬ್ಳಿ, ಸಿಬ್ಬಂದಿ ಸುರೇಶ, ರೇಣುಕಪ್ಪ. ಕುಮಾರ ನಾಯ್ಕ್, ಚನ್ನಬಸಪ್ಪ, ಕೃಷ್ಣ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.ವಿಜಯನಗರ: ಮೈಲಾರಜ್ಜನ ಜಾತ್ರೆಗೆ ಭಕ್ತರ ದಂಡು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಟಿ.ದೇವದಾಸ್ ಮತ್ತು ಅವರ ಕಚೇರಿಯ ಅಕೌಂಟೆಂಟ್ ಮಾರುತಿ ಅವರು ಮಂಗಳವಾರ ಇಲ್ಲಿನ ತಮ್ಮ ಕಚೇರಿಯಲ್ಲಿ ಗುತ್ತಿಗೆದಾರರೊಬ್ಬರಿಂದ ₹1 ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.</p>.ವಿಜಯನಗರ | ಟ್ರಾವೆಲ್ಲರ್ ನೂಕ್; ಮಾರ್ಚ್ 30ರ ಗಡುವು: ಡಿ.ಸಿ ಸೂಚನೆ.<p>ಹೂವಿನಹಡಗಲಿಯ ಗುತ್ತಿಗೆದಾರ ಮಹೇಶ್ ಹಲಗೇರಿ ಅವರು ಲೋಕೋಪಯೋಗಿ ಇಲಾಖೆಯ ಟೆಂಡರ್ ಮೂಲಕ ಕಾಮಗಾರಿ ಪಡೆದುಕೊಂಡು ಕಾಮಗಾರಿ ಮುಗಿಸಿದ್ದರು. ಬಿಲ್ ಮಂಜೂರಾತಿಗಾಗಿ ದೇವದಾಸ್ ಮತ್ತು ಮಾರುತಿ ಅವರು ಶೇ 10ರಷ್ಟು ಕಮಿಷನ್ ರೂಪದಲ್ಲಿ ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಯುಕ್ತಕ್ಕೆ ದೂರು ನೀಡಲಾಗಿತ್ತು. ಅದರಂತೆ ಗುತ್ತಿಗೆದಾರರು ಲಂಚ ನೀಡುತ್ತಿದ್ದಾಗ ಈ ಇಬ್ಬರೂ ಲೋಕಾಯುಕ್ತ ಬಲೆಗೆ ಬಿದ್ದರು. ಅವರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p><p>ಲೋಕಾಯುಕ್ತ ಡಿವೈಎಸ್ಪಿ ಸಚಿನ್ ಎಸ್.ಚಲವಾದಿ, ಇನ್ಸ್ಪೆಕ್ಟರ್ಗಳಾದ ರಾಜೇಶ್ ಎಸ್.ಲಮಾಣಿ, ಅಮರೇಶ್ ಹುಬ್ಳಿ, ಸಿಬ್ಬಂದಿ ಸುರೇಶ, ರೇಣುಕಪ್ಪ. ಕುಮಾರ ನಾಯ್ಕ್, ಚನ್ನಬಸಪ್ಪ, ಕೃಷ್ಣ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.ವಿಜಯನಗರ: ಮೈಲಾರಜ್ಜನ ಜಾತ್ರೆಗೆ ಭಕ್ತರ ದಂಡು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>