ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾನವಮಿ‌ ದಿಬ್ಬದ ಬಳಿ ಹೆಬ್ಬಾವು ಪ್ರತ್ಯಕ್ಷ

Last Updated 15 ಜೂನ್ 2021, 17:12 IST
ಅಕ್ಷರ ಗಾತ್ರ

ಹೊಸಪೇಟೆ(ವಿಜಯನಗರ): ತಾಲ್ಲೂಕಿನ ಹಂಪಿ ಮಹಾನವಮಿ ದಿಬ್ಬದ ಬಳಿ ಮಂಗಳವಾರ ಹೆಬ್ಬಾವು ಕಾಣಿಸಿಕೊಂಡಿದೆ.

ಈ ವಿಷಯ ತಿಳಿದ ಭದ್ರತಾ ಸಿಬ್ಬಂದಿ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಉಪ ಅರಣ್ಯ ಅಧಿಕಾರಿ ಪರಶುರಾಮ, ಅರಣ್ಯ ರಕ್ಷಕ ರವಿಚಂದ್ರ, ಉರಗತಜ್ಞ ವೇಣುಗೋಪಾಲ ಅವರು ಹೆಬ್ಬಾವು ರಕ್ಷಿಸಿ, ಬಳಿಕ ಅದನ್ನು ಸಮೀಪದ ದರೋಜಿ ಕರಡಿಧಾಮದಲ್ಲಿ ಬಿಟ್ಟಿದ್ದಾರೆ.

‘ಕೋವಿಡ್‌ ಲಾಕ್‌ಡೌನ್‌ನಿಂದ ಹಂಪಿ ಸ್ಮಾರಕಗಳ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಜನರ ಓಡಾಟ ಇಲ್ಲದಿರುವುದರಿಂದ ಹೆಬ್ಬಾವು ಮಹಾನವಮಿ ದಿಬ್ಬದ ಬಳಿ ಬಂದಿರುವ ಸಾಧ್ಯತೆ ಇದೆ. ನಾಲ್ಕರಿಂದ ಐದು ಅಡಿ ಉದ್ದದ ಹಾವು ಇದಾಗಿದೆ. ಹಂಪಿ ಸುತ್ತಮುತ್ತ ಕುರುಚಲು ಕಾಡು, ಬೆಟ್ಟ ಗುಡ್ಡಗಳಿರುವುದರಿಂದ ಅಲ್ಲಿನ ಪರಿಸರದಲ್ಲಿ ಅನೇಕ ಬಗೆಯ ಜೀವಜಂತುಗಳು ನೆಲೆಸಿವೆ’ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT