ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ದಿನವಿಡೀ ತುಂತುರು ಮಳೆ

Last Updated 13 ನವೆಂಬರ್ 2021, 15:39 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ನಗರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಶನಿವಾರ ದಿನವಿಡೀ ತುಂತುರು ಮಳೆಯಾಗಿದೆ.

ಬೆಳಿಗ್ಗೆ ಕಾರ್ಮೋಡ ಕವಿದಿತ್ತು. ತಂಗಾಳಿ ಬೀಸುತ್ತಿತ್ತು. ಮಧ್ಯಾಹ್ನ ಏಕಾಏಕಿ ಮಳೆ ಆರಂಭಗೊಂಡಿತು. ದಿನವಿಡೀ ಬಿಟ್ಟು ಬಿಟ್ಟು ತುಂತುರು ಮಳೆಯಾಯಿತು. ಮಳೆಗೆ ವಾತಾವರಣ ಮತ್ತಷ್ಟು ತಂಪಾಯಿತು.
ತುಂತುರು ಮಳೆ ಜತೆ ಸಂಜೆ ವೇಳೆ ದಟ್ಟ ಮಂಜು ಆವರಿಸಿಕೊಂಡಿತ್ತು. ಕಳೆದ ಹಲವು ದಿನಗಳಿಂದ ಕಾರ್ಮೋಡ ಇರುತ್ತಿದ್ದು, ಸೂರ್ಯನ ದರ್ಶನ ಅಪರೂಪ ಎಂಬಂತಾಗಿದೆ. ಬಿಸಿಲ ನಗರಿ, ಗಣಿ ನಗರಿ ಈಗ ಮಂಜಿನ ನಗರಿಯಾಗಿದೆ.

ತಾಲ್ಲೂಕಿನ ಹಂಪಿಯಲ್ಲೂ ಮಳೆಯಾಗಿರುವುದು ವರದಿಯಾಗಿದೆ. ಪ್ರವಾಸಿಗರು ಮಳೆಯಲ್ಲೇ ನೆನೆದುಕೊಂಡು ಸ್ಮಾರಕಗಳನ್ನು ಕಣ್ತುಂಬಿಕೊಂಡರು. ಇನ್ನೂ ಕೆಲವು ದಿನಗಳ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT