ರೈಲು ನಿಲ್ದಾಣ ರಸ್ತೆಯಲ್ಲಿರುವ ಭತ್ತ, ಕಬ್ಬಿನ ಜಮೀನಿನಲ್ಲಿ ರಿಯಲ್ ಎಸ್ಟೇಟ್ ಮಾಫಿಯಾಗಳು ಹಗಲು–ರಾತ್ರಿ ಗ್ರಾವೆಲ್ ಹಾಕಿಸುತ್ತಿದ್ದಾರೆ. ಇದರಿಂದ ಎಲ್ಲೆಡೆ ಮಣ್ಣು, ದೂಳು ಹರಡಿ ಸ್ಥಳೀಯರು ಉಸಿರಾಟ, ಕಣ್ಣಿನ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಇದನ್ನು ತಡೆಯಬೇಕು. ಇಲ್ಲವಾದಲ್ಲಿ ಬರುವ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ವೇದಿಕೆಯ ಜಿಲ್ಲಾ ಅಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ ಇತರರಿದ್ದರು.