ರಾಜ್ಯೋತ್ಸವವನ್ನು ಈ ಸಲ ಅರ್ಥಪೂರ್ಣವಾಗಿ ಆಚರಿಸಲಾಗುವುದು. ನ. 1ರಂದು ಬೆಳಿಗ್ಗೆ 9ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಭುವನೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವರು. ಅವರ ಭಾಷಣದ ನಂತರ ವಿವಿಧ ಶಾಲಾ, ಕಾಲೇಜು ಹಾಗೂ ಪೊಲೀಸರು, ಆಶಾ, ಅಂಗನವಾಡಿ, ಎನ್.ಸಿ.ಸಿ., ಸ್ಕೌಟ್ಸ್ ಮತ್ತು ಗೈಡ್ಸ್, ಪೌರಕಾರ್ಮಿಕರಿಂದ ಪಥ ಸಂಚಲನ ನಡೆಯಲಿದೆ ಎಂದು ತಿಳಿಸಿದರು.