ಮರಿಯಮ್ಮನಹಳ್ಳಿ: ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದಾರೆಂದು ಹೊಸಪೇಟೆಯ ಆಹಾರ ನಿರೀಕ್ಷಕರು ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಪಟ್ಟಣದ ಹೊರವಲಯ ರಾಷ್ಟ್ರೀಯ ಹೆದ್ದಾರಿ-50ರ ದುರ್ಗಾ ಪೆಟ್ರೋಲ್ ಬಂಕ್ ಬಳಿ ಕಾರ್ಯಾಚರಣೆ ನಡೆಸಿದ್ದು, ಲಾರಿಯಲ್ಲಿ ಸಾಗಣೆ ಮಾಡುತ್ತಿದ್ದ ₹ 1,32,600 ಮೌಲ್ಯದ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಕಾಳ ಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಪಡಿತರ ಕಾರ್ಡುದಾರರಿಗೆ ಹಣದ ಆಮಿಷ ತೋರಿಸಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಂಗ್ರಹಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ವೇಳೆ ಪೊಲೀಸರು ದಾಳಿ ಮಾಡಿದ್ದಾರೆ. ಲಾರಿಯಲ್ಲಿದ್ದ ಒಟ್ಟು 260 ಚೀಲಗಳಲ್ಲಿ 8,840 ಕೆ.ಜಿ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.