ಹೊಸಪೇಟೆ (ವಿಜಯನಗರ): ‘ಬೆಂಕಿ ಅವಘಡದಲ್ಲಿ ತಾಲ್ಲೂಕು ಕಚೇರಿಯ ಸಾಂಖ್ಯಿಕ ವಿಭಾಗದಲ್ಲಿನ ಜನನ–ಮರಣ ಪ್ರಮಾಣ ಪತ್ರಗಳ ದಾಖಲೆಗಳು ಸುಟ್ಟು ಹೋಗಿದ್ದು, ಅವುಗಳ ನಕಲು ಪ್ರತಿ ಹೊಂದಿದವರು ಪೂರಕ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಿ, ಅದರ ಸಂಖ್ಯೆಯನ್ನು ನೋಂದಣಿ ಮಾಡಿ ಸಹಕರಿಸಬೇಕು’ ಎಂದು ತಹಶೀಲ್ದಾರ್ ಎಚ್. ವಿಶ್ವನಾಥ್ ಮನವಿ ಮಾಡಿದ್ದಾರೆ.