<p><strong>ಹೊಸಪೇಟೆ (ವಿಜಯನಗರ)</strong>: ಸಾಮಾಜಿಕ ಹೊಣೆಗಾರಿಕೆ ಎಂಬುದು ಸಂಶೋಧನೆಗೆ ಮಾತ್ರವಲ್ಲದೆ ಸಮಾಜದ ಯಾವುದೇ ಕ್ಷೇತ್ರದಲ್ಲಿರುವ ಅಥವಾ ಯಾವುದೇ ವೃತ್ತಿಯಲ್ಲಿ ತೊಡಗಿರುವ ಪ್ರತಿಯೊಬ್ಬರಿಗೂ ಇರಬೇಕಾದ ಜವಾಬ್ದಾರಿ ಹಾಗೂ ಪದ್ಧತಿಯಾಗಿದೆ ಎಂದು ವಿಮರ್ಶಕ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಪ್ರೊ.ಬಂಜಗೆರೆ ಜಯಪ್ರಕಾಶ್ ಹೇಳಿದರು.</p>.<p>ವಿದ್ಯಾರಣ್ಯ ಕ್ಯಾಂಪಸ್ನಲ್ಲಿ ಮಂಗಳವಾರ ಅಧ್ಯಯನಾಂಗದ ವತಿಯಿಂದ ಆಯೋಜಿಸಲಾಗಿದ್ದ ಯುಜಿಸಿ ಪಿಎಚ್.ಡಿ. ಕೋರ್ಸ್ವರ್ಕ್ ಎರಡನೇ ಹಂತದ ಕಾರ್ಯಕ್ರಮದಲ್ಲಿ ‘ಸಂಶೋಧನೆ ಮತ್ತು ಸಾಮಾಜಿಕ ಹೊಣೆಗಾರಿಕೆ’' ವಿಷಯದ ಮೇಲೆ ಅವರು ಮಾತನಾಡಿದರು.</p>.<p>‘ಸಂಶೋಧಕರು ಸಂಶೋಧನೆಯನ್ನು ಹವ್ಯಾಸವಾಗಿ ರೂಢಿಸಿಕೊಳ್ಳಬೇಕು. ಕೇವಲ ಪದವಿಗಾಗಿ ಸಂಶೋಧನೆ ಕೈಗೊಳ್ಳಬಾರದು’ ಎಂದು ಕಿವಿಮಾತು ಹೇಳಿದರು.</p>.<p>ನಿವೃತ್ತ ಪ್ರಾಧ್ಯಾಪಕ ಪ್ರೊ. ಜೆ.ಎಂ.ನಾಗಯ್ಯ ಮಾತನಾಡಿ, ಸಂಶೋಧನೆಯಲ್ಲಿ ಹೊಸ ವಿಷಯವನ್ನು ಕಂಡುಹಿಡಿದರೆ ಅದು ಆವಿಷ್ಕಾರವಾಗುತ್ತದೆ. ಇಲ್ಲಿ ಯಾವುದೇ ಒಂದು ವಿಷಯ ತನ್ನಷ್ಟಕ್ಕೆ ಸ್ವತಂತ್ರವಾಗಿರುವುದಿಲ್ಲ; ಅವು ಸಮಾಜಕ್ಕೆ ಸಂಬಂಧಿಸಿದ ಮನುಷ್ಯರಿಂದಲೇ ಜನ್ಮ ತಾಳಿವೆ ಎಂದರು.</p>.<p>ಕುಲಸಚಿವ ಪ್ರೊ.ವಿರೂಪಾಕ್ಷಿ ಪೂಜಾರಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ಅಧ್ಯಯನಾಂಗದ ನಿರ್ದೇಶಕ ಪ್ರೊ.ಅಮರೇಶ ಯತಗಲ್ ಅವರು ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ)</strong>: ಸಾಮಾಜಿಕ ಹೊಣೆಗಾರಿಕೆ ಎಂಬುದು ಸಂಶೋಧನೆಗೆ ಮಾತ್ರವಲ್ಲದೆ ಸಮಾಜದ ಯಾವುದೇ ಕ್ಷೇತ್ರದಲ್ಲಿರುವ ಅಥವಾ ಯಾವುದೇ ವೃತ್ತಿಯಲ್ಲಿ ತೊಡಗಿರುವ ಪ್ರತಿಯೊಬ್ಬರಿಗೂ ಇರಬೇಕಾದ ಜವಾಬ್ದಾರಿ ಹಾಗೂ ಪದ್ಧತಿಯಾಗಿದೆ ಎಂದು ವಿಮರ್ಶಕ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಪ್ರೊ.ಬಂಜಗೆರೆ ಜಯಪ್ರಕಾಶ್ ಹೇಳಿದರು.</p>.<p>ವಿದ್ಯಾರಣ್ಯ ಕ್ಯಾಂಪಸ್ನಲ್ಲಿ ಮಂಗಳವಾರ ಅಧ್ಯಯನಾಂಗದ ವತಿಯಿಂದ ಆಯೋಜಿಸಲಾಗಿದ್ದ ಯುಜಿಸಿ ಪಿಎಚ್.ಡಿ. ಕೋರ್ಸ್ವರ್ಕ್ ಎರಡನೇ ಹಂತದ ಕಾರ್ಯಕ್ರಮದಲ್ಲಿ ‘ಸಂಶೋಧನೆ ಮತ್ತು ಸಾಮಾಜಿಕ ಹೊಣೆಗಾರಿಕೆ’' ವಿಷಯದ ಮೇಲೆ ಅವರು ಮಾತನಾಡಿದರು.</p>.<p>‘ಸಂಶೋಧಕರು ಸಂಶೋಧನೆಯನ್ನು ಹವ್ಯಾಸವಾಗಿ ರೂಢಿಸಿಕೊಳ್ಳಬೇಕು. ಕೇವಲ ಪದವಿಗಾಗಿ ಸಂಶೋಧನೆ ಕೈಗೊಳ್ಳಬಾರದು’ ಎಂದು ಕಿವಿಮಾತು ಹೇಳಿದರು.</p>.<p>ನಿವೃತ್ತ ಪ್ರಾಧ್ಯಾಪಕ ಪ್ರೊ. ಜೆ.ಎಂ.ನಾಗಯ್ಯ ಮಾತನಾಡಿ, ಸಂಶೋಧನೆಯಲ್ಲಿ ಹೊಸ ವಿಷಯವನ್ನು ಕಂಡುಹಿಡಿದರೆ ಅದು ಆವಿಷ್ಕಾರವಾಗುತ್ತದೆ. ಇಲ್ಲಿ ಯಾವುದೇ ಒಂದು ವಿಷಯ ತನ್ನಷ್ಟಕ್ಕೆ ಸ್ವತಂತ್ರವಾಗಿರುವುದಿಲ್ಲ; ಅವು ಸಮಾಜಕ್ಕೆ ಸಂಬಂಧಿಸಿದ ಮನುಷ್ಯರಿಂದಲೇ ಜನ್ಮ ತಾಳಿವೆ ಎಂದರು.</p>.<p>ಕುಲಸಚಿವ ಪ್ರೊ.ವಿರೂಪಾಕ್ಷಿ ಪೂಜಾರಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ಅಧ್ಯಯನಾಂಗದ ನಿರ್ದೇಶಕ ಪ್ರೊ.ಅಮರೇಶ ಯತಗಲ್ ಅವರು ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>