<p><strong>ಹೊಸಪೇಟೆ (ವಿಜಯನಗರ): </strong>ನಗರದ 35ನೇ ವಾರ್ಡಿನಲ್ಲಿ ವಾಸಿಸುತ್ತಿರುವ ಕೃಷ್ಣಾನಗರ ತಾಂಡ (ಬದ್ಯಾನಾಯ್ಕ್ ತಾಂಡ)ನಿವಾಸಿಗಳನ್ನು ತೆರವುಗೊಳಿಸಬಾರದು ಎಂದು ಸ್ಥಳೀಯರು ಆಗ್ರಹಿಸಿದರು.</p>.<p>ಈ ಸಂಬಂಧ ಸ್ಥಳೀಯ ನಿವಾಸಿಗಳು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಧಿಕಾರಿ ಕಚೇರಿ, ನಗರಸಭೆ, ತಾಲ್ಲೂಕು ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಪತ್ರ ಸಲ್ಲಿಸಿದರು.</p>.<p>ನಗರಸಭೆಯ 35ನೇ ವಾರ್ಡಿನಲ್ಲಿ 90 ವರ್ಷಗಳಿಂದ ವಾಸಿಸುತ್ತಿದ್ದರೂ ಇಲ್ಲಿಯವರೆಗೆ ನಮ್ಮ ತಾಂಡವನ್ನು ನಗರಸಭೆ ‘ಡಿಮ್ಯಾಂಡ್’ನಲ್ಲಿ ಸೇರಿಸಿಲ್ಲ. ಈ ಬಗ್ಗೆ 2018ರಲ್ಲಿ ಅರ್ಜಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಸಂಡೂರು-ಹೊಸಪೇಟೆ ಸಿ.ಸಿ ರಸ್ತೆ ಹಾಗೂ ವೈದ್ಯಕೀಯ ಕಾಲೇಜು ನಿರ್ಮಾಣದ ನೆಪ ಹೇಳಿ ಸಚಿವ ಆನಂದ್ ಸಿಂಗ್ ಅವರು ಸ್ಥಳೀಯರನ್ನು ಸ್ಥಳಾಂತರಿಸಲು ಸೂಚಿಸಿದ್ದಾರೆ. ಇದು ಸರಿಯಲ್ಲ ಎಂದು ತಿಳಿಸಿದರು.</p>.<p>ಬಂಜಾರ ಸೇವಾ ಸಂಘದ ಅಧ್ಯಕ್ಷ ಆರ್.ರಾಮ್ಜಿ ನಾಯ್ಕ, ಪ್ರಧಾನ ಕಾರ್ಯದರ್ಶಿ ಎಲ್.ತೇಜಾನಾಯ್ಕ, ಮುಖಂಡರಾದ ಗುಡಗುಂಟೆ ಮಲ್ಲಿಕಾರ್ಜುನ, ಎಲ್.ಕೃಷ್ಣಾ ನಾಯ್ಕ, ಎಲ್.ಗೋವಿಂದ ನಾಯ್ಕ, ಎಲ್.ಸುರೇಶ್ ನಾಯ್ಕ, ಎಲ್.ಚಂದ್ರಾ ನಾಯ್ಕ, ಕೆ.ವೆಂಕಟೇಶ್, ನಾಗಾ ನಾಯ್ಕ, ಹುಲುಗಪ್ಪ, ಮಂಜುಳಾ ಬಾಯಿ, ನೀಲಾಬಾಯಿ, ಸೀತಾಬಾಯಿ, ಗಂದಿಬಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ): </strong>ನಗರದ 35ನೇ ವಾರ್ಡಿನಲ್ಲಿ ವಾಸಿಸುತ್ತಿರುವ ಕೃಷ್ಣಾನಗರ ತಾಂಡ (ಬದ್ಯಾನಾಯ್ಕ್ ತಾಂಡ)ನಿವಾಸಿಗಳನ್ನು ತೆರವುಗೊಳಿಸಬಾರದು ಎಂದು ಸ್ಥಳೀಯರು ಆಗ್ರಹಿಸಿದರು.</p>.<p>ಈ ಸಂಬಂಧ ಸ್ಥಳೀಯ ನಿವಾಸಿಗಳು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಧಿಕಾರಿ ಕಚೇರಿ, ನಗರಸಭೆ, ತಾಲ್ಲೂಕು ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಪತ್ರ ಸಲ್ಲಿಸಿದರು.</p>.<p>ನಗರಸಭೆಯ 35ನೇ ವಾರ್ಡಿನಲ್ಲಿ 90 ವರ್ಷಗಳಿಂದ ವಾಸಿಸುತ್ತಿದ್ದರೂ ಇಲ್ಲಿಯವರೆಗೆ ನಮ್ಮ ತಾಂಡವನ್ನು ನಗರಸಭೆ ‘ಡಿಮ್ಯಾಂಡ್’ನಲ್ಲಿ ಸೇರಿಸಿಲ್ಲ. ಈ ಬಗ್ಗೆ 2018ರಲ್ಲಿ ಅರ್ಜಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಸಂಡೂರು-ಹೊಸಪೇಟೆ ಸಿ.ಸಿ ರಸ್ತೆ ಹಾಗೂ ವೈದ್ಯಕೀಯ ಕಾಲೇಜು ನಿರ್ಮಾಣದ ನೆಪ ಹೇಳಿ ಸಚಿವ ಆನಂದ್ ಸಿಂಗ್ ಅವರು ಸ್ಥಳೀಯರನ್ನು ಸ್ಥಳಾಂತರಿಸಲು ಸೂಚಿಸಿದ್ದಾರೆ. ಇದು ಸರಿಯಲ್ಲ ಎಂದು ತಿಳಿಸಿದರು.</p>.<p>ಬಂಜಾರ ಸೇವಾ ಸಂಘದ ಅಧ್ಯಕ್ಷ ಆರ್.ರಾಮ್ಜಿ ನಾಯ್ಕ, ಪ್ರಧಾನ ಕಾರ್ಯದರ್ಶಿ ಎಲ್.ತೇಜಾನಾಯ್ಕ, ಮುಖಂಡರಾದ ಗುಡಗುಂಟೆ ಮಲ್ಲಿಕಾರ್ಜುನ, ಎಲ್.ಕೃಷ್ಣಾ ನಾಯ್ಕ, ಎಲ್.ಗೋವಿಂದ ನಾಯ್ಕ, ಎಲ್.ಸುರೇಶ್ ನಾಯ್ಕ, ಎಲ್.ಚಂದ್ರಾ ನಾಯ್ಕ, ಕೆ.ವೆಂಕಟೇಶ್, ನಾಗಾ ನಾಯ್ಕ, ಹುಲುಗಪ್ಪ, ಮಂಜುಳಾ ಬಾಯಿ, ನೀಲಾಬಾಯಿ, ಸೀತಾಬಾಯಿ, ಗಂದಿಬಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>