ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರಶೈವ ಲಿಂಗಾಯತ ಸಮಾಜದಿಂದ ಶ್ರದ್ಧಾಂಜಲಿ

Last Updated 9 ಡಿಸೆಂಬರ್ 2021, 15:25 IST
ಅಕ್ಷರ ಗಾತ್ರ

ಹೊಸಪೇಟೆ(ವಿಜಯನಗರ): ಭಾರತೀಯ ಸೇನಾ ಪಡೆಗಳ ಮುಖ್ಯಸ್ಥ ಜ. ಬಿಪಿನ್ ರಾವತ್ ಹಾಗೂ ಬಸವತತ್ವ ಪ್ರಚಾರಕ ಈಶ್ವರ್ ಮಂಟೂರ ಅವರಿಗೆ ತಾಲ್ಲೂಕು ವೀರಶೈವ ಲಿಂಗಾಯತ ಸಮಾಜದಿಂದ ಗುರುವಾರ ಸಂಜೆ ನಗರದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ನಗರದ ಕೊಟ್ಟೂರು ಸ್ವಾಮಿ ಮಠದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು ಎರಡು ನಿಮಿಷ ಮೌನ ಆಚರಿಸಿದರು. ಬಳಿಕ ಬಿಪಿನ್ ರಾವತ್ ಹಾಗೂ ಈಶ್ವರ್ ಮಂಟೂರ ಅವರ ಭಾವಚಿತ್ರಕ್ಕೆ ಪುಷ್ಪ ಗೌರವ ಸಲ್ಲಿಸಿದರು. ಅಧ್ಯಕ್ಷ ವಿ.ಶರಣ ಸ್ವಾಮಿ ಮಾತನಾಡಿ, ‘ಕೊಟ್ಟೂರು ಸ್ವಾಮಿ ಮಠದೊಂದಿಗೆ ಈಶ್ವರ ಮಂಟೂರ ಅವರ ಒಡನಾಟ ಇತ್ತು. ಸಮಾಜಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ’ ಎಂದರು.

ಕಾರ್ಯದರ್ಶಿ ಕೆ.ರವಿಶಂಕರ್, ಮುಖಂಡರಾದ ಸಾಲಿ ಸಿದ್ದಯ್ಯ ಸ್ವಾಮಿ, ಕೊಟ್ರೇಶ್ ಉತ್ತಂಗಿ, ನಾಗರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT