ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ: ಅಮಲಾಪುರ ಬಳಿ ಲಾರಿ ಹರಿದು ಕರಡಿ ಸಾವು

ಅಕ್ಷರ ಗಾತ್ರ

ಕೂಡ್ಲಿಗಿ: ಲಾರಿ ಹರಿದು ಕರಡಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಅಮಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ತಾಲ್ಲೂಕಿನ ಗುಡೇಕೋಟೆ ಗ್ರಾಮದ ಬಳಿ ಕರಡಿಧಾಮವಿದೆ. ಧಾಮದ ಅರಣ್ಯಕ್ಕೆ ಅಂಟಿಕೊಂಡಂತೆ ಅಮಲಾಪುರ ಬಳಿ ಕಾದಿಟ್ಟ ಅರಣ್ಯದ ಮೂಲಕ ಆಹಾರ ಅರಸಿ ಬಂದಿರುವ ಕರಡಿಯು ರಾಷ್ಟ್ರೀಯ ಹೆದ್ದಾರಿ ದಾಟುತ್ತಿರುವ ಸಂದರ್ಭದಲ್ಲಿ ಲಾರಿಯೊಂದು ಹರಿದಿದ್ದರಿಂದ ಸ್ಥಳದಲ್ಲೇ ಸತ್ತಿದೆ.

ಹೆದ್ದಾರಿಯಲ್ಲಿ ಲಾರಿ ಹರಿದು ಕರಡಿ ಸತ್ತು ಬಿದ್ದಿರುವ ಮಾಹಿತಿಯನ್ನು ಅಮಲಾಪುರದ ಕೆಲವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಬಳಿಕ ಸ್ಥಳಕ್ಕೆ ವಲಯ ಅರಣ್ಯಧಿಕಾರಿ ಬಿ.ಎಸ್. ಮಂಜುನಾಥ ಭೇಟಿ ನೀಡಿ ಪರಿಶೀಲಿಸಿ, ಕರಡಿಯನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲು ವ್ಯವಸ್ಥೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT