<p><strong>ಹೊಸಪೇಟೆ (ವಿಜಯನಗರ):</strong> ನಗರದ ಪಟ್ಟಣ ಪೊಲೀಸ್ ಠಾಣೆ ಆವರಣದಲ್ಲಿ ಭಾನುವಾರ ಹೊಸಪೇಟೆ ಉಪವಿಭಾಗ ವ್ಯಾಪ್ತಿಯ 134 ಮಂದಿ ರೌಡಿ ಶೀಟರ್ಗಳ ಪರೇಡ್ ನಡೆಯಿತು ಹಾಗೂ ಎಸ್ಪಿ ಶ್ರೀಹರಿಬಾಬು ಬಿ.ಎಲ್. ಅವರು ಯಾವುದೇ ರೀತಿಯಲ್ಲಿ ಅಶಾಂತಿ ಉಂಟುಮಾಡದಂತೆ ಸೂಚನೆ ನೀಡಿದರು.</p>.<p>ಹೊಸಪೇಟೆ ಉಪವಿಭಾಗ ವ್ಯಾಪ್ತಿಯಲ್ಲಿ 194 ಮಂದಿ ರೌಡಿಶೀಟರ್ಗಳಿದ್ದು, ಈ ಪೈಕಿ 134 ಮಂದಿ ಪರೇಡ್ನಲ್ಲಿ ಹಾಜರಾಗಿದ್ದರು. ಒಬ್ಬೊಬ್ಬರ ಮೇಲಿನ ಪ್ರಕರಣವನ್ನೂ ಪರಿಶೀಲಿಸಿದ ಎಸ್ಪಿ ಅವರು, ಸಮಾಜದಲ್ಲಿ ಶಾಂತಿ ಕದಡುವ ಯತ್ನ ಮಾಡಿದರೆ ಶಿಸ್ತಿನ ಕ್ರಮ ನಿಶ್ಚಿತ ಎಂದು ಎಚ್ಚರಿಸಿದರು.</p>.<p>ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್ಪಿ, ‘ಜಿಲ್ಲೆಯಲ್ಲಿ 641 ರೌಡಿ ಶೀಟರ್ಗಳಿದ್ದಾರೆ, ಈ ಪೈಕಿ 591 ಮಂದಿಯನ್ನು ಸಂಪರ್ಕಿಸಿ, ಸಮಾಜವಿರೋಧಿ ಚಟುವಟಿಕೆಗಳಲ್ಲಿ ತೊಡಗದಂತೆ ಸೂಚಿಸಲಾಗಿದೆ. ಹೊಸಪೇಟೆ ಉಪವಿಭಾಗದಂತೆ ಹರಪನಹಳ್ಳಿ ಮತ್ತು ಕೂಡ್ಲಿಗಿ ಉಪವಿಭಾಗಗಳಲ್ಲಿ ಸಹ ಇಂತಹದೇ ಪರೇಡ್ ನಡೆಸಲಾಗುತ್ತಿದೆ’ ಎಂದರು.</p>.<p><strong>ದಿಢೀರ್ ಪರೇಡ್ಗೆ ಕಾರಣ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠರ ಸಭೆ ನಡೆಸಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದರು. ಅದರಂತೆ ಎಸ್ಪಿ ಅವರಿಂದ ಈ ಪರೇಡ್ ನಡೆಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ನಗರದ ಪಟ್ಟಣ ಪೊಲೀಸ್ ಠಾಣೆ ಆವರಣದಲ್ಲಿ ಭಾನುವಾರ ಹೊಸಪೇಟೆ ಉಪವಿಭಾಗ ವ್ಯಾಪ್ತಿಯ 134 ಮಂದಿ ರೌಡಿ ಶೀಟರ್ಗಳ ಪರೇಡ್ ನಡೆಯಿತು ಹಾಗೂ ಎಸ್ಪಿ ಶ್ರೀಹರಿಬಾಬು ಬಿ.ಎಲ್. ಅವರು ಯಾವುದೇ ರೀತಿಯಲ್ಲಿ ಅಶಾಂತಿ ಉಂಟುಮಾಡದಂತೆ ಸೂಚನೆ ನೀಡಿದರು.</p>.<p>ಹೊಸಪೇಟೆ ಉಪವಿಭಾಗ ವ್ಯಾಪ್ತಿಯಲ್ಲಿ 194 ಮಂದಿ ರೌಡಿಶೀಟರ್ಗಳಿದ್ದು, ಈ ಪೈಕಿ 134 ಮಂದಿ ಪರೇಡ್ನಲ್ಲಿ ಹಾಜರಾಗಿದ್ದರು. ಒಬ್ಬೊಬ್ಬರ ಮೇಲಿನ ಪ್ರಕರಣವನ್ನೂ ಪರಿಶೀಲಿಸಿದ ಎಸ್ಪಿ ಅವರು, ಸಮಾಜದಲ್ಲಿ ಶಾಂತಿ ಕದಡುವ ಯತ್ನ ಮಾಡಿದರೆ ಶಿಸ್ತಿನ ಕ್ರಮ ನಿಶ್ಚಿತ ಎಂದು ಎಚ್ಚರಿಸಿದರು.</p>.<p>ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್ಪಿ, ‘ಜಿಲ್ಲೆಯಲ್ಲಿ 641 ರೌಡಿ ಶೀಟರ್ಗಳಿದ್ದಾರೆ, ಈ ಪೈಕಿ 591 ಮಂದಿಯನ್ನು ಸಂಪರ್ಕಿಸಿ, ಸಮಾಜವಿರೋಧಿ ಚಟುವಟಿಕೆಗಳಲ್ಲಿ ತೊಡಗದಂತೆ ಸೂಚಿಸಲಾಗಿದೆ. ಹೊಸಪೇಟೆ ಉಪವಿಭಾಗದಂತೆ ಹರಪನಹಳ್ಳಿ ಮತ್ತು ಕೂಡ್ಲಿಗಿ ಉಪವಿಭಾಗಗಳಲ್ಲಿ ಸಹ ಇಂತಹದೇ ಪರೇಡ್ ನಡೆಸಲಾಗುತ್ತಿದೆ’ ಎಂದರು.</p>.<p><strong>ದಿಢೀರ್ ಪರೇಡ್ಗೆ ಕಾರಣ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠರ ಸಭೆ ನಡೆಸಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದರು. ಅದರಂತೆ ಎಸ್ಪಿ ಅವರಿಂದ ಈ ಪರೇಡ್ ನಡೆಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>