<p><strong>ಹೊಸಪೇಟೆ (ವಿಜಯನಗರ):</strong> ಜಿಲ್ಲೆಯಲ್ಲಿರುವ ರೌಡಿಗಳ ಚಲನವಲನಗಳ ಮೇಲೆ ಪೊಲೀಸ್ ಇಲಾಖೆ ಸದಾ ಕಣ್ಣಿಟ್ಟಿದೆ. ಸುಧಾರಣೆ ಕಾಣದೆ, ಅಪರಾಧ ಕೃತ್ಯಗಳಲ್ಲಿ ಭಾಗವಹಿಸುತ್ತಿರುವ 15ಕ್ಕೂ ಅಧಿಕ ರೌಡಿಗಳನ್ನು ಗಡೀಪಾರು ಮಾಡಲು ತೀರ್ಮಾನಿಸಲಾಗಿದೆ ಎಂದು ಎಸ್ಪಿ ಎಸ್.ಜಾಹ್ನವಿ ಹೇಳಿದರು.</p>.<p>ಇಲ್ಲಿನ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ ಜಿಲ್ಲೆಯ 21 ಠಾಣೆಗಳ ವ್ಯಾಪ್ತಿಯ 220 ರೌಡಿಗಳ ಪರೇಡ್ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ಅಶಾಂತಿ, ರೌಡಿಸಂ ಮಾಡುತ್ತಿರುವವರನ್ನು ವಿಚಾರಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿಂದಿನ ಇತಿಹಾಸ, ಈಗ ಅವರು ನಡೆಸುತ್ತಿರುವ ಚಟುವಟಿಕೆಗಳ ಮೇಲೆ ಸೂಕ್ಷ್ಮ ನಿಗಾ ವಹಿಸಿದ್ದೇವೆ. ಅವರ ಆರ್ಥಿಕತೆಯ ಮೇಲೂ ನಿಗಾ ಇರುತ್ತದೆ ಎಂದರು.</p>.<p>ಇದಕ್ಕೆ ಮೊದಲು ರೌಡಿಗಳನ್ನು ಉದ್ದೇಶಿಸಿ ಮಾತನಾಡಿದ ಎಸ್ಪಿ, ಅಪರಾಧ ಚಟುವಟಿಕೆಗಳಿಂದ ದೂರ ಇದ್ದು ಜೀವನದಲ್ಲಿ ಸುಧಾರಣೆ ಕಾಣಬೇಕು, ಮತ್ತೆ ಈ ಕೃತ್ಯಕ್ಕೆ ಇಳಿದರೆ ಪೊಲೀಸರು ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದರು. </p>.<p>‘ನಿಮ್ಮ ಜೀವನದಲ್ಲಿ ತಪ್ಪು ಆಗಿದೆ, ನೀವು ಸುಧಾರಿಸಿಕೊಳ್ಳಲು, ನಿಮ್ಮ ತಪ್ಪು ತಿದ್ದಿಕೊಳ್ಳಲು ನಾವು ಅವಕಾಶವನ್ನೂ ನೀಡಿದ್ದೇವೆ. ಒಳ್ಳೆಯ ರೀತಿಯಲ್ಲಿ ಬದುಕು ಕಟ್ಟಿಕೊಳ್ಳಿ, ಸಮಾಜದಲ್ಲಿ ಇನ್ನಾದರೂ ಉತ್ತಮ ರೀತಿಯಲ್ಲಿ ಬಾಳ್ವೆ ನಡೆಸಿ, ನೀವು ಸುಧಾರಣೆ ಆದಂತೆ ನಿಮ್ಮ ಸುತ್ತಲಿನ ಸಮಾಜವೂ ಸುಧಾರಣೆಯಾಗುತ್ತದೆ ಎಂಬುದನ್ನು ಮರೆಯಬೇಡಿ’ ಎಂದು ಕಿವಿಮಾತು ಹೇಳಿದರು.</p>.<p>ಎಎಸ್ಪಿ ಜಿ.ಮಂಜುನಾಥ್, ಡಿವೈಎಸ್ಪಿ ಟಿ.ಮಂಜುನಾಥ್, ಹಲವು ಇನ್ಸ್ಪೆಕ್ಟರ್ಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಜಿಲ್ಲೆಯಲ್ಲಿರುವ ರೌಡಿಗಳ ಚಲನವಲನಗಳ ಮೇಲೆ ಪೊಲೀಸ್ ಇಲಾಖೆ ಸದಾ ಕಣ್ಣಿಟ್ಟಿದೆ. ಸುಧಾರಣೆ ಕಾಣದೆ, ಅಪರಾಧ ಕೃತ್ಯಗಳಲ್ಲಿ ಭಾಗವಹಿಸುತ್ತಿರುವ 15ಕ್ಕೂ ಅಧಿಕ ರೌಡಿಗಳನ್ನು ಗಡೀಪಾರು ಮಾಡಲು ತೀರ್ಮಾನಿಸಲಾಗಿದೆ ಎಂದು ಎಸ್ಪಿ ಎಸ್.ಜಾಹ್ನವಿ ಹೇಳಿದರು.</p>.<p>ಇಲ್ಲಿನ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ ಜಿಲ್ಲೆಯ 21 ಠಾಣೆಗಳ ವ್ಯಾಪ್ತಿಯ 220 ರೌಡಿಗಳ ಪರೇಡ್ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ಅಶಾಂತಿ, ರೌಡಿಸಂ ಮಾಡುತ್ತಿರುವವರನ್ನು ವಿಚಾರಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿಂದಿನ ಇತಿಹಾಸ, ಈಗ ಅವರು ನಡೆಸುತ್ತಿರುವ ಚಟುವಟಿಕೆಗಳ ಮೇಲೆ ಸೂಕ್ಷ್ಮ ನಿಗಾ ವಹಿಸಿದ್ದೇವೆ. ಅವರ ಆರ್ಥಿಕತೆಯ ಮೇಲೂ ನಿಗಾ ಇರುತ್ತದೆ ಎಂದರು.</p>.<p>ಇದಕ್ಕೆ ಮೊದಲು ರೌಡಿಗಳನ್ನು ಉದ್ದೇಶಿಸಿ ಮಾತನಾಡಿದ ಎಸ್ಪಿ, ಅಪರಾಧ ಚಟುವಟಿಕೆಗಳಿಂದ ದೂರ ಇದ್ದು ಜೀವನದಲ್ಲಿ ಸುಧಾರಣೆ ಕಾಣಬೇಕು, ಮತ್ತೆ ಈ ಕೃತ್ಯಕ್ಕೆ ಇಳಿದರೆ ಪೊಲೀಸರು ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದರು. </p>.<p>‘ನಿಮ್ಮ ಜೀವನದಲ್ಲಿ ತಪ್ಪು ಆಗಿದೆ, ನೀವು ಸುಧಾರಿಸಿಕೊಳ್ಳಲು, ನಿಮ್ಮ ತಪ್ಪು ತಿದ್ದಿಕೊಳ್ಳಲು ನಾವು ಅವಕಾಶವನ್ನೂ ನೀಡಿದ್ದೇವೆ. ಒಳ್ಳೆಯ ರೀತಿಯಲ್ಲಿ ಬದುಕು ಕಟ್ಟಿಕೊಳ್ಳಿ, ಸಮಾಜದಲ್ಲಿ ಇನ್ನಾದರೂ ಉತ್ತಮ ರೀತಿಯಲ್ಲಿ ಬಾಳ್ವೆ ನಡೆಸಿ, ನೀವು ಸುಧಾರಣೆ ಆದಂತೆ ನಿಮ್ಮ ಸುತ್ತಲಿನ ಸಮಾಜವೂ ಸುಧಾರಣೆಯಾಗುತ್ತದೆ ಎಂಬುದನ್ನು ಮರೆಯಬೇಡಿ’ ಎಂದು ಕಿವಿಮಾತು ಹೇಳಿದರು.</p>.<p>ಎಎಸ್ಪಿ ಜಿ.ಮಂಜುನಾಥ್, ಡಿವೈಎಸ್ಪಿ ಟಿ.ಮಂಜುನಾಥ್, ಹಲವು ಇನ್ಸ್ಪೆಕ್ಟರ್ಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>