ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್ನಿಂದ ಮೃತಪಟ್ಟ 100 ಕುಟುಂಬದವರಿಗೆ ಶಾಸಕ ಎಸ್. ಭೀಮಾ ನಾಯ್ಕ ಅವರು ಮಂಗಳವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ‘ಆತ್ಮನಮನ’ ಕಾರ್ಯಕ್ರಮದಲ್ಲಿ ತಲಾ ₹10,000 ಪರಿಹಾರ ವಿತರಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಮೃತರ ನೆನಪಿನಲ್ಲಿ 100 ಸಸಿಗಳನ್ನು ನೆಡಲಾಯಿತು. ಬಳಿಕ ಎರಡು ನಿಮಿಷ ಮೌನ ಆಚರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.