ಅಧ್ಯಕ್ಷರ ರಾಜೀನಾಮೆ ಅಂಗೀಕಾರ
ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಆನಂದ್ ಸಿಂಗ್ ಅವರು ನೀಡಿರುವ ರಾಜೀನಾಮೆಯನ್ನು ಮಹಾಸಭೆ ಅಂಗೀಕರಿಸಿದೆ. ಉಪಾಧ್ಯಕ್ಷರಾಗಿರುವ ಕೆ.ತಿಪ್ಪೇಸ್ವಾಮಿ ಅವರು ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲು ಅಧಿಕಾರ ನೀಡಲಾಗಿದೆ. ಅಧ್ಯಕ್ಷ ಸ್ಥಾನದ ತೆರವಾಗಿರುವ ಕುರಿತು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲಾಗಿದ್ದು ಆಯೋಗ ನೀಡುವ ಸೂಚನೆಯಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಬಿ.ಎಸ್.ಹರೀಶ್ ತಿಳಿಸಿದರು.