<p><strong>ಹೊಸಪೇಟೆ (ವಿಜಯನಗರ):</strong> ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಧ್ಯೇಯ, ಉದ್ದೇಶಗಳ ಕುರಿತು 23 ದೇಶಗಳಲ್ಲಿ ಪ್ರಚಾರದಲ್ಲಿ ತೊಡಗಿರುವ ಪ್ರಚಾರಕರು, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ ನೇತೃತ್ವದಲ್ಲಿ ಬುಧವಾರ ಹಂಪಿಯ ವಿಜಯ ವಿಠ್ಠಲ ದೇವಸ್ಥಾನಕ್ಕೆ ಭೇಟಿ ನೀಡಿದರು.</p>.<p>ಹಂಪಿ ಸಮೀಪದ ಆನೆಗೊಂದಿಯಲ್ಲಿ ನಡೆಯುವ ಮೂರು ದಿನಗಳ ಚಿಂತನ ಮಂಥನ ಸಭೆಯಲ್ಲಿ ಪಾಲ್ಗೊಳ್ಳಲು ಬಂದಿರುವ ಅವರು, ಸಭೆಯ ನಡುವೆ ಬಿಡುವು ಮಾಡಿಕೊಂಡು ಹಂಪಿಗೆ ಭೇಟಿ ನೀಡಿದರು.</p>.<p>‘ಅಮೆರಿಕ, ಕೆನಡಾ, ದುಬೈ, ನೈಜೀರಿಯಾ, ಮ್ಯಾನ್ಮಾರ್ ಸೇರಿ 23 ದೇಶಗಳಲ್ಲಿ ಅವರು ಪ್ರಚಾರಕರಾಗಿ ದ್ದಾರೆ. ಅವರೆಲ್ಲ ವಿದೇಶದಲ್ಲೇ ಹುಟ್ಟಿದ ಭಾರತೀಯ ಮೂಲದವರು. ವಿಶ್ವ ಪಾರಂಪರಿಕ ತಾಣ ಹಂಪಿಯ ದರ್ಶನದ ಜತೆಗೆ ಇಲ್ಲೇ ಆರ್ಎಸ್ಎಸ್ ಕುರಿತಂತೆ ಅವರಿಗೆ ಇನ್ನಷ್ಟು ಮಾಹಿತಿ ಒದಗಿಸಲು ಈ ಸಭೆ ಆಯೋಜಿಸಲಾಗಿದೆ, ಇದಕ್ಕೆ ಸ್ಥಳೀಯ ಸ್ವಯಂಸೇವಕರು, ಮುಖಂಡರು ಸೇರಿ ಯಾರಿಗೂ ಪ್ರವೇಶ ಇಲ್ಲ’ ಎಂದು ಸಂಘದ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಆರ್ಎಸ್ಎಸ್ ಈಗ ಶತಮಾನೋತ್ಸವ ಆಚರಿಸುತ್ತಿದೆ. ವಿದೇಶಗಳಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಆರ್ಎಸ್ಎಸ್ ಕುರಿತು ಜನರಿಗೆ ಮನವರಿಕೆ ಮಾಡಿಕೊಡಲು ಈ ಸಭೆ ನಡೆಸಲಾಗುತ್ತಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಧ್ಯೇಯ, ಉದ್ದೇಶಗಳ ಕುರಿತು 23 ದೇಶಗಳಲ್ಲಿ ಪ್ರಚಾರದಲ್ಲಿ ತೊಡಗಿರುವ ಪ್ರಚಾರಕರು, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ ನೇತೃತ್ವದಲ್ಲಿ ಬುಧವಾರ ಹಂಪಿಯ ವಿಜಯ ವಿಠ್ಠಲ ದೇವಸ್ಥಾನಕ್ಕೆ ಭೇಟಿ ನೀಡಿದರು.</p>.<p>ಹಂಪಿ ಸಮೀಪದ ಆನೆಗೊಂದಿಯಲ್ಲಿ ನಡೆಯುವ ಮೂರು ದಿನಗಳ ಚಿಂತನ ಮಂಥನ ಸಭೆಯಲ್ಲಿ ಪಾಲ್ಗೊಳ್ಳಲು ಬಂದಿರುವ ಅವರು, ಸಭೆಯ ನಡುವೆ ಬಿಡುವು ಮಾಡಿಕೊಂಡು ಹಂಪಿಗೆ ಭೇಟಿ ನೀಡಿದರು.</p>.<p>‘ಅಮೆರಿಕ, ಕೆನಡಾ, ದುಬೈ, ನೈಜೀರಿಯಾ, ಮ್ಯಾನ್ಮಾರ್ ಸೇರಿ 23 ದೇಶಗಳಲ್ಲಿ ಅವರು ಪ್ರಚಾರಕರಾಗಿ ದ್ದಾರೆ. ಅವರೆಲ್ಲ ವಿದೇಶದಲ್ಲೇ ಹುಟ್ಟಿದ ಭಾರತೀಯ ಮೂಲದವರು. ವಿಶ್ವ ಪಾರಂಪರಿಕ ತಾಣ ಹಂಪಿಯ ದರ್ಶನದ ಜತೆಗೆ ಇಲ್ಲೇ ಆರ್ಎಸ್ಎಸ್ ಕುರಿತಂತೆ ಅವರಿಗೆ ಇನ್ನಷ್ಟು ಮಾಹಿತಿ ಒದಗಿಸಲು ಈ ಸಭೆ ಆಯೋಜಿಸಲಾಗಿದೆ, ಇದಕ್ಕೆ ಸ್ಥಳೀಯ ಸ್ವಯಂಸೇವಕರು, ಮುಖಂಡರು ಸೇರಿ ಯಾರಿಗೂ ಪ್ರವೇಶ ಇಲ್ಲ’ ಎಂದು ಸಂಘದ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಆರ್ಎಸ್ಎಸ್ ಈಗ ಶತಮಾನೋತ್ಸವ ಆಚರಿಸುತ್ತಿದೆ. ವಿದೇಶಗಳಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಆರ್ಎಸ್ಎಸ್ ಕುರಿತು ಜನರಿಗೆ ಮನವರಿಕೆ ಮಾಡಿಕೊಡಲು ಈ ಸಭೆ ನಡೆಸಲಾಗುತ್ತಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>