<p><strong>ಹಗರಿಬೊಮ್ಮನಹಳ್ಳಿ:</strong> ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸ್ಥಾಪನೆಯಾಗಿ 100 ವರ್ಷ ಪೂರೈಸಿದ ಹಿನ್ನೆಲೆ ಪಟ್ಟಣದಲ್ಲಿ ಗಣವೇಷಧಾರಿಗಳು ಭಾನುವಾರ ಮಳೆಯಲ್ಲಿಯೇ ಪಥ ಸಂಚಲನ ನಡೆಸಿದರು.</p>.<p>ಹಳೇ ಊರಿನ ಅಂಬಾಭವಾನಿ ದೇವಸ್ಥಾನದಿಂದ ಬಸವೇಶ್ವರ ವೃತ್ತ, ರಾಜ್ಯ ಹೆದ್ದಾರಿಯ ಮುಖ್ಯ ರಸ್ತೆ, ಡಾ. ಬಿ.ಆರ್.ಅಂಬೇಡ್ಕರ್ ವೃತ್ತ, ತೇರು ಬೀದಿ, ಕೂಡ್ಲಿಗಿ ವೃತ್ತದ ಮೂಲಕ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ವಿದ್ಯಾರಣ್ಯ ಸಭಾಮಂಟಪದವರೆಗೂ ಪಥಸಂಚಲನ ಸಾಗಿತು.</p>.<p>ಮಾರ್ಗದುದಕ್ಕೂ ಗಣವೇಷಧಾರಿಗಳ ಮೇಲೆ ಪುಷ್ಪಸುರಿಮಳೆ ಗೈಯಲಾಗಿತು. ಪೊಲೀಸರು ಭಾರಿ ಬಂದೋಬಸ್ತ್ ಒದಗಿಸಿದ್ದರು. ಸಿಪಿಐ ವಿಕಾಸ್ ಲಮಾಣಿ, ಪಿಎಸ್ಐ ಬಸವರಾಜ ಅಡವಿಬಾವಿ ಮಳೆಯಲ್ಲಿಯೇ ಪಥಸಂಚಲನದ ಜತೆ ಹೆಜ್ಜೆ ಹಾಕಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಹೆಚ್ಚುವರಿ ಎಸ್ಪಿ ಜಿ.ಮಂಜುನಾಥ, ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಪಟ್ಟಣದಲ್ಲಿ ಮೊಕ್ಕಾಂ ಹೂಡಿದ್ದರು. ನಂದಿಪುರದ ಮಹೇಶ್ವರ ಸ್ವಾಮೀಜಿ, ಹಾಲಸಿದ್ದೇಶ್ವರ ಸ್ವಾಮೀಜಿ, ಶಿವಪ್ರಕಾಶ ಸ್ವಾಮೀಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ:</strong> ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸ್ಥಾಪನೆಯಾಗಿ 100 ವರ್ಷ ಪೂರೈಸಿದ ಹಿನ್ನೆಲೆ ಪಟ್ಟಣದಲ್ಲಿ ಗಣವೇಷಧಾರಿಗಳು ಭಾನುವಾರ ಮಳೆಯಲ್ಲಿಯೇ ಪಥ ಸಂಚಲನ ನಡೆಸಿದರು.</p>.<p>ಹಳೇ ಊರಿನ ಅಂಬಾಭವಾನಿ ದೇವಸ್ಥಾನದಿಂದ ಬಸವೇಶ್ವರ ವೃತ್ತ, ರಾಜ್ಯ ಹೆದ್ದಾರಿಯ ಮುಖ್ಯ ರಸ್ತೆ, ಡಾ. ಬಿ.ಆರ್.ಅಂಬೇಡ್ಕರ್ ವೃತ್ತ, ತೇರು ಬೀದಿ, ಕೂಡ್ಲಿಗಿ ವೃತ್ತದ ಮೂಲಕ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ವಿದ್ಯಾರಣ್ಯ ಸಭಾಮಂಟಪದವರೆಗೂ ಪಥಸಂಚಲನ ಸಾಗಿತು.</p>.<p>ಮಾರ್ಗದುದಕ್ಕೂ ಗಣವೇಷಧಾರಿಗಳ ಮೇಲೆ ಪುಷ್ಪಸುರಿಮಳೆ ಗೈಯಲಾಗಿತು. ಪೊಲೀಸರು ಭಾರಿ ಬಂದೋಬಸ್ತ್ ಒದಗಿಸಿದ್ದರು. ಸಿಪಿಐ ವಿಕಾಸ್ ಲಮಾಣಿ, ಪಿಎಸ್ಐ ಬಸವರಾಜ ಅಡವಿಬಾವಿ ಮಳೆಯಲ್ಲಿಯೇ ಪಥಸಂಚಲನದ ಜತೆ ಹೆಜ್ಜೆ ಹಾಕಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಹೆಚ್ಚುವರಿ ಎಸ್ಪಿ ಜಿ.ಮಂಜುನಾಥ, ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಪಟ್ಟಣದಲ್ಲಿ ಮೊಕ್ಕಾಂ ಹೂಡಿದ್ದರು. ನಂದಿಪುರದ ಮಹೇಶ್ವರ ಸ್ವಾಮೀಜಿ, ಹಾಲಸಿದ್ದೇಶ್ವರ ಸ್ವಾಮೀಜಿ, ಶಿವಪ್ರಕಾಶ ಸ್ವಾಮೀಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>